ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಆಗಿರುವ ಮೋದಿ ಅವರು ಈ ರೀತಿ ತಮ್ಮ ಭಾಷಣಗಳಲ್ಲಿ ಸಮಾಜ ವಿಭಜಿಸುವ ಮಾತುಗಳನ್ನಾಡುತ್ತಿರುವುದು ಸರಿಯಲ್ಲ. ಈ ಹಿಂದಿನ ಯಾವುದೇ ಪ್ರಧಾನಿಗಳು ಈ ರೀತಿ ಭಾಷಣಗಳನ್ನು ಮಾಡಿಲ್ಲ. ಪದೇ ಪದೇ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಅವರು( ಮೋದಿ), ಪ್ರಜಾಪ್ರಭುತ್ವದ ತತ್ವಗಳಿಗೆ ಬದ್ಧರಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮಮಂದಿರ ನಿರ್ಮಾಣ ಹಾಗೂ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದಿರುವುದನ್ನು ಮರಳಿ ಮುಂದುವರಿಸಲಿದೆ ಎಂಬ ಬಿಜೆಪಿ ಹೇಳಿಕೆಗೆ ಪ್ರತ್ರಿಕ್ರಿಯಿಸಿದ ಖರ್ಗೆ, ನಾವು ಯಾವುದೇ ಬುಲ್ಡೋಜರ್ ಅನ್ನು ಎಲ್ಲಿಯೂ, ಯಾರ ಮೇಲೂ ಬಳಸುವುದಿಲ್ಲ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಜಾರಿಗೆ ತರುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.