<p><strong>ಛಿಂದವಾಢ (ಮಧ್ಯಪ್ರದೇಶ):</strong> ಮಧ್ಯಪ್ರದೇಶದ ಛಿಂದವಾಡ ನಗರದ ಮೇಯರ್ ವಿಕ್ರಮ್ ಅಹಾಕೆ ಅವರು ಮತದಾನದ ದಿನ ‘ಉಲ್ಟಾ’ ಹೊಡೆದಿದ್ದು, ಕಾಂಗ್ರೆಸ್ಗೆ ಬೆಂಬಲ ನೀಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.</p>.<p>ಛಿಂದವಾಡ ಲೋಕಸಭಾ ಕ್ಷೇತ್ರದ ಮತದಾನ ಶುಕ್ರವಾರ ನಡೆಯಿತು. ಇಲ್ಲಿ ಕಾಂಗ್ರೆಸ್ನ ನಕುಲ್ನಾಥ್ (ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರ ಪುತ್ರ) ಮತ್ತು ಬಿಜೆಪಿಯ ವಿವೇಕ್ ಬಂಟಿ ಸಾಹು ಮಧ್ಯೆ ಪೈಪೋಟಿಯಿದೆ.</p>.<p>ವಿಕ್ರಮ್ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಮ್ಮುಖದಲ್ಲಿ ಏಪ್ರಿಲ್ 1ರಂದು ಬಿಜೆಪಿ ಸೇರಿದ್ದರು. ಆದರೆ ಶುಕ್ರವಾರ ಅವರು ‘ಕಾಂಗ್ರೆಸ್ ಅಭ್ಯರ್ಥಿ ನಕುಲ್ನಾಥ್ಗೆ ಮತ ನೀಡಿ’ ಎಂದು ಮನವಿ ಮಾಡಿದ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಬಿಜೆಪಿ ಸೇರಿದ ಬಳಿಕ ನನಗೆ ಉಸಿರು ಕಟ್ಟಿದಂತಹ ಅನುಭವ ಉಂಟಾಗಿದೆ. ಛಿಂದವಾಢದ ಅಭಿವೃದ್ಧಿಗೆ ಶ್ರಮಿಸಿದ ಕಮಲ್ನಾಥ್ ಮತ್ತು ನಕುಲ್ನಾಥ್ ಅವರ ಪರ ನಾನು ನಿಲ್ಲುತ್ತೇನೆ. ನಕುಲ್ನಾಥ್ ಅವರ ಗೆಲುವನ್ನು ಖಾತರಿಪಡಿಸುವಂತೆ ಮತದಾರರಲ್ಲಿ ಮನವಿ ಮಾಡುತ್ತೇನೆ’ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛಿಂದವಾಢ (ಮಧ್ಯಪ್ರದೇಶ):</strong> ಮಧ್ಯಪ್ರದೇಶದ ಛಿಂದವಾಡ ನಗರದ ಮೇಯರ್ ವಿಕ್ರಮ್ ಅಹಾಕೆ ಅವರು ಮತದಾನದ ದಿನ ‘ಉಲ್ಟಾ’ ಹೊಡೆದಿದ್ದು, ಕಾಂಗ್ರೆಸ್ಗೆ ಬೆಂಬಲ ನೀಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.</p>.<p>ಛಿಂದವಾಡ ಲೋಕಸಭಾ ಕ್ಷೇತ್ರದ ಮತದಾನ ಶುಕ್ರವಾರ ನಡೆಯಿತು. ಇಲ್ಲಿ ಕಾಂಗ್ರೆಸ್ನ ನಕುಲ್ನಾಥ್ (ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರ ಪುತ್ರ) ಮತ್ತು ಬಿಜೆಪಿಯ ವಿವೇಕ್ ಬಂಟಿ ಸಾಹು ಮಧ್ಯೆ ಪೈಪೋಟಿಯಿದೆ.</p>.<p>ವಿಕ್ರಮ್ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಮ್ಮುಖದಲ್ಲಿ ಏಪ್ರಿಲ್ 1ರಂದು ಬಿಜೆಪಿ ಸೇರಿದ್ದರು. ಆದರೆ ಶುಕ್ರವಾರ ಅವರು ‘ಕಾಂಗ್ರೆಸ್ ಅಭ್ಯರ್ಥಿ ನಕುಲ್ನಾಥ್ಗೆ ಮತ ನೀಡಿ’ ಎಂದು ಮನವಿ ಮಾಡಿದ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಬಿಜೆಪಿ ಸೇರಿದ ಬಳಿಕ ನನಗೆ ಉಸಿರು ಕಟ್ಟಿದಂತಹ ಅನುಭವ ಉಂಟಾಗಿದೆ. ಛಿಂದವಾಢದ ಅಭಿವೃದ್ಧಿಗೆ ಶ್ರಮಿಸಿದ ಕಮಲ್ನಾಥ್ ಮತ್ತು ನಕುಲ್ನಾಥ್ ಅವರ ಪರ ನಾನು ನಿಲ್ಲುತ್ತೇನೆ. ನಕುಲ್ನಾಥ್ ಅವರ ಗೆಲುವನ್ನು ಖಾತರಿಪಡಿಸುವಂತೆ ಮತದಾರರಲ್ಲಿ ಮನವಿ ಮಾಡುತ್ತೇನೆ’ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>