<p><strong>ಲಖನೌ</strong> : ಲೋಕಸಭಾ ಚುನಾವಣೆಯಲ್ಲಿ ಒಂದೂ ಸ್ಥಾನ ಗೆಲ್ಲಲಾಗದ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ಅವರು, ಮುಸ್ಲಿಂ ಸಮುದಾಯದವರಿಗೆ ತಮ್ಮ ಪಕ್ಷವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಆಗಿಲ್ಲ ಎಂದು ಹೇಳಿದರು. </p>.<p>ಫಲಿತಾಂಶದ ಕುರಿತು ಬುಧವಾರ ಮಾತನಾಡಿದ ಅವರು, ‘ಇನ್ನು ಮುಂದೆ ಮುಸ್ಲಿಮರನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸುವ ಮುನ್ನ ಸಾಕಷ್ಟು ಆಲೋಚಿಸಬೇಕಾಗುತ್ತದೆ’ ಎಂದೂ ಎಚ್ಚರಿಸಿದರು. </p>.<p>ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಉಳಿದ ಪಕ್ಷಗಳಿಗಿಂತ ಅತ್ಯಧಿಕವಾದ 35 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ‘ಮುಸ್ಲಿಮರಿಗೆ ಉತ್ತಮ ಪ್ರಾತಿನಿಧ್ಯ ನೀಡಿದ ಹೊರತಾಗಿಯೂ ಆ ಸಮುದಾಯದ ಮತದಾರರು ಬಿಎಸ್ಪಿಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ದಲಿತರು, ಅದರಲ್ಲೂ ಜಾಟವ ಸಮುದಾಯದವರು ಉತ್ತಮ ರೀತಿಯಲ್ಲಿ ಸ್ಪಂದಿಸಿದರು. ಅವರಿಗೆ ಕೃತಜ್ಞಳಾಗಿದ್ದೇನೆ’ ಎಂದರು. </p>.<p>ಬಿಸಿಲು ಹೆಚ್ಚಾಗಿರುವ ಸಂದರ್ಭದಲ್ಲಿ ಹಾಗೂ ಏಳು ಹಂತಗಳಲ್ಲಿ ಮತದಾನ ನಡೆಸುವ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಅವರು, ಮೂರ್ನಾಲ್ಕು ಹಂತಗಳಲ್ಲೇ ಮತದಾನ ನಡೆಯಲು ಅವಕಾಶ ನೀಡಬೇಕು ಎಂದೂ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong> : ಲೋಕಸಭಾ ಚುನಾವಣೆಯಲ್ಲಿ ಒಂದೂ ಸ್ಥಾನ ಗೆಲ್ಲಲಾಗದ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ಅವರು, ಮುಸ್ಲಿಂ ಸಮುದಾಯದವರಿಗೆ ತಮ್ಮ ಪಕ್ಷವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಆಗಿಲ್ಲ ಎಂದು ಹೇಳಿದರು. </p>.<p>ಫಲಿತಾಂಶದ ಕುರಿತು ಬುಧವಾರ ಮಾತನಾಡಿದ ಅವರು, ‘ಇನ್ನು ಮುಂದೆ ಮುಸ್ಲಿಮರನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸುವ ಮುನ್ನ ಸಾಕಷ್ಟು ಆಲೋಚಿಸಬೇಕಾಗುತ್ತದೆ’ ಎಂದೂ ಎಚ್ಚರಿಸಿದರು. </p>.<p>ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಉಳಿದ ಪಕ್ಷಗಳಿಗಿಂತ ಅತ್ಯಧಿಕವಾದ 35 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ‘ಮುಸ್ಲಿಮರಿಗೆ ಉತ್ತಮ ಪ್ರಾತಿನಿಧ್ಯ ನೀಡಿದ ಹೊರತಾಗಿಯೂ ಆ ಸಮುದಾಯದ ಮತದಾರರು ಬಿಎಸ್ಪಿಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ದಲಿತರು, ಅದರಲ್ಲೂ ಜಾಟವ ಸಮುದಾಯದವರು ಉತ್ತಮ ರೀತಿಯಲ್ಲಿ ಸ್ಪಂದಿಸಿದರು. ಅವರಿಗೆ ಕೃತಜ್ಞಳಾಗಿದ್ದೇನೆ’ ಎಂದರು. </p>.<p>ಬಿಸಿಲು ಹೆಚ್ಚಾಗಿರುವ ಸಂದರ್ಭದಲ್ಲಿ ಹಾಗೂ ಏಳು ಹಂತಗಳಲ್ಲಿ ಮತದಾನ ನಡೆಸುವ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಅವರು, ಮೂರ್ನಾಲ್ಕು ಹಂತಗಳಲ್ಲೇ ಮತದಾನ ನಡೆಯಲು ಅವಕಾಶ ನೀಡಬೇಕು ಎಂದೂ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>