ಕೇಜ್ರಿವಾಲ್ ಕುರಿತು ಮಾತನಾಡಿದ ನಡ್ಡಾ, ’ಕೆಲವು ವರ್ಷಗಳ ಹಿಂದೆ ಯಾವುದೇ ಪಕ್ಷವನ್ನು ಸ್ಥಾಪಿಸುವುದಿಲ್ಲ, ಚುನಾವಣೆಯಲ್ಲಿಯೂ ಸ್ಪರ್ಧಿಸುವುದಿಲ್ಲ ಎಂದಿದ್ದರು, ಆದರೆ ನಂತರ ಪಕ್ಷವನ್ನೂ ಕಟ್ಟಿ, ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅದೂ ಅಲ್ಲದೆ ಕಾಂಗ್ರೆಸ್ ಜತೆಗೆ ಎಂದಿಗೂ ಕೈಜೋಡಿಸುವುದಿಲ್ಲ ಎಂದಿದ್ದರು, ಅದು ಆಗಿದೆ. ಯಾವುದೇ ಭ್ರಷ್ಟಾಚಾರ ಎಸಗುವುದಿಲ್ಲ ಎಂದಿದ್ದರು, ಈಗ ಭ್ರಷ್ಟಾಚಾರ ಪ್ರಕರಣದಲ್ಲಿ ಎಎಪಿಯ ಮೂವರು ಜೈಲಿನಲ್ಲಿದ್ದಾರೆ’ ಎಂದರು.
ಅವರು (ಎಎಪಿ) ಒಳ್ಳೆಯ ಮಾತುಗಳನ್ನಾಡಬಹುದು ಆದರೆ ಮಾಡುವುದು ಕೊಳಕು ಕೆಲಸ. ಈಗ ಹೇಳಿ ಇಂತಹ ಜನರಿಗೆ ಪಾಠ ಕಲಿಸುತ್ತೀರಾ? ಅವರನ್ನು ಸೋಲಿಸುವ ಮೂಲಕ ಮನೆಯಲ್ಲಿ ಕುಳಿತುಕೊಳ್ಳುವಂತೆ ಮಾಡುತ್ತೀರಾ ಅಥವಾ ಮತ ಹಾಕುವ ಮೂಲಕ ಮುಂದೆ ಬರುವಂತೆ ಮಾಡುತ್ತೀರಾ? ಎಂದರು.
ಕುರುಕ್ಷೇತ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನವೀನ್ ಜಿಂದಾಲ್ ಪರ ನಡ್ಡಾ ಮತಯಾಚಿಸಿದರು. ಹರಿಯಾಣದಲ್ಲಿ ಮೇ 25ರಂದು ಮತದಾನ ನಡೆಯಲಿದೆ.