‘ಆದರೆ, ಕಾಶ್ಮೀರದ ಮೂರು ಸ್ಥಾನಗಳಲ್ಲಿಯೂ ಸ್ಪರ್ಧಿಸುವ ಏಕಪಕ್ಷೀಯ ನಿರ್ಧಾರವನ್ನು ಅವರು ಕೈಗೊಂಡರು. ಪಿಡಿಪಿಗೆ ಜನಬೆಂಬಲವಿಲ್ಲ ಮತ್ತು ಪಕ್ಷ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದು ಒಮರ್ ಹೇಳುವ ಮೂಲಕ ನಮಗೆ ಅವಮಾನ ಮಾಡಿದ್ದಾರೆ. ನಾವು ಚುನಾವಣೆಗೆ ಸ್ಪರ್ಧಿಸುತ್ತೇವೆ ಮತ್ತು ನಿರ್ಧಾರವನ್ನು ಜನರಿಗೆ ಬಿಡುತ್ತೇವೆ’ ಎಂದು ಮೆಹಬೂಬಾ ಹೇಳಿದರು.