<p>ಪನ್ನಾ: ಮಧ್ಯಪ್ರದೇಶದ ಖಜುರಾಹೊ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ (ಎಸ್ಪಿ) ಅಭ್ಯರ್ಥಿ ಮೀರಾ ಯಾದವ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಶುಕ್ರವಾರ ತಿರಸ್ಕರಿಸಿದ್ದಾರೆ. </p>.<p>‘ಇಂಡಿಯಾ’ ಕೂಟದ ಮೈತ್ರಿ ಒಪ್ಪಂದದಂತೆ ಕಾಂಗ್ರೆಸ್ ಈ ಸ್ಥಾನವನ್ನು ಎಸ್ಪಿಗೆ ಬಿಟ್ಟುಕೊಟ್ಟಿತ್ತು.</p>.<p>‘ಮೀರಾ ಅವರ ನಾಮಪತ್ರವನ್ನು ಚುನಾವಣಾಧಿಕಾರಿಯೂ ಆಗಿರುವ ಪನ್ನಾ ಜಿಲ್ಲಾಧಿಕಾರಿ ತಿರಸ್ಕರಿಸಿದ್ದಾರೆ. ಮೀರಾ ಅವರು ಬಿ ಫಾರಂಗೆ ಸಹಿ ಮಾಡಿರಲಿಲ್ಲ ಮತ್ತು 2023ರ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯನ್ನು ಲಗತ್ತಿಸಿರಲಿಲ್ಲ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಮೀರಾ ಅವರ ಪತಿ ದೀಪ್ ನಾರಾಯಣ್ ಯಾದವ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಚುನಾವಣಾಧಿಕಾರಿಯ ಆದೇಶದ ವಿರುದ್ಧ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. </p>.<p>‘ಪರಿಶೀಲನೆಯ ನಂತರ ಗುರುವಾರ ನಾಮಪತ್ರವನ್ನು ಪರೀಕ್ಷಿಸಿದ್ದೆವು. ಅಭ್ಯರ್ಥಿ ಅನಕ್ಷರಸ್ಥರಾಗಿದ್ದರೂ, ನಾಮಪತ್ರದಲ್ಲಿ ಏನಾದರೂ ವ್ಯತ್ಯಾಸವಿದ್ದರೆ ಅದನ್ನು ಸರಿಪಡಿಸಿಕೊಳ್ಳಬೇಕು ಎಂಬ ನಿಯಮವೇ ಇದೆ. ಗುರುವಾರ ನಾಮಪತ್ರದಲ್ಲಿ ಎಲ್ಲವೂ ಸರಿಯಿತ್ತು. ಶುಕ್ರವಾರ ಎರಡು ಲೋಪಗಳನ್ನು ತೋರಿಸುತ್ತಿದ್ದಾರೆ’ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಕಣದಲ್ಲಿ 15 ಮಂದಿ ಇದ್ದು, ಪಕ್ಷದ ಹಿರಿಯರ ಸಲಹೆ ಪಡೆದು ಅವರಲ್ಲಿ ಯಾರಾದರೊಬ್ಬರನ್ನು ಬೆಂಬಲಿಸುತ್ತೇವೆ’ ಎಂದು ಹೇಳಿದರು. ಬಿಜೆಪಿಯಿಂದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮತ್ತು ಹಾಲಿ ಸಂಸದ ವಿಷ್ಣು ದತ್ತ ಅವರು ಸ್ಪರ್ಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪನ್ನಾ: ಮಧ್ಯಪ್ರದೇಶದ ಖಜುರಾಹೊ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ (ಎಸ್ಪಿ) ಅಭ್ಯರ್ಥಿ ಮೀರಾ ಯಾದವ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಶುಕ್ರವಾರ ತಿರಸ್ಕರಿಸಿದ್ದಾರೆ. </p>.<p>‘ಇಂಡಿಯಾ’ ಕೂಟದ ಮೈತ್ರಿ ಒಪ್ಪಂದದಂತೆ ಕಾಂಗ್ರೆಸ್ ಈ ಸ್ಥಾನವನ್ನು ಎಸ್ಪಿಗೆ ಬಿಟ್ಟುಕೊಟ್ಟಿತ್ತು.</p>.<p>‘ಮೀರಾ ಅವರ ನಾಮಪತ್ರವನ್ನು ಚುನಾವಣಾಧಿಕಾರಿಯೂ ಆಗಿರುವ ಪನ್ನಾ ಜಿಲ್ಲಾಧಿಕಾರಿ ತಿರಸ್ಕರಿಸಿದ್ದಾರೆ. ಮೀರಾ ಅವರು ಬಿ ಫಾರಂಗೆ ಸಹಿ ಮಾಡಿರಲಿಲ್ಲ ಮತ್ತು 2023ರ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯನ್ನು ಲಗತ್ತಿಸಿರಲಿಲ್ಲ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಮೀರಾ ಅವರ ಪತಿ ದೀಪ್ ನಾರಾಯಣ್ ಯಾದವ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಚುನಾವಣಾಧಿಕಾರಿಯ ಆದೇಶದ ವಿರುದ್ಧ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. </p>.<p>‘ಪರಿಶೀಲನೆಯ ನಂತರ ಗುರುವಾರ ನಾಮಪತ್ರವನ್ನು ಪರೀಕ್ಷಿಸಿದ್ದೆವು. ಅಭ್ಯರ್ಥಿ ಅನಕ್ಷರಸ್ಥರಾಗಿದ್ದರೂ, ನಾಮಪತ್ರದಲ್ಲಿ ಏನಾದರೂ ವ್ಯತ್ಯಾಸವಿದ್ದರೆ ಅದನ್ನು ಸರಿಪಡಿಸಿಕೊಳ್ಳಬೇಕು ಎಂಬ ನಿಯಮವೇ ಇದೆ. ಗುರುವಾರ ನಾಮಪತ್ರದಲ್ಲಿ ಎಲ್ಲವೂ ಸರಿಯಿತ್ತು. ಶುಕ್ರವಾರ ಎರಡು ಲೋಪಗಳನ್ನು ತೋರಿಸುತ್ತಿದ್ದಾರೆ’ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಕಣದಲ್ಲಿ 15 ಮಂದಿ ಇದ್ದು, ಪಕ್ಷದ ಹಿರಿಯರ ಸಲಹೆ ಪಡೆದು ಅವರಲ್ಲಿ ಯಾರಾದರೊಬ್ಬರನ್ನು ಬೆಂಬಲಿಸುತ್ತೇವೆ’ ಎಂದು ಹೇಳಿದರು. ಬಿಜೆಪಿಯಿಂದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮತ್ತು ಹಾಲಿ ಸಂಸದ ವಿಷ್ಣು ದತ್ತ ಅವರು ಸ್ಪರ್ಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>