<p><strong>ಭುವನೇಶ್ವರ:</strong> ರಾಜ್ಯದಲ್ಲಿ ಏಕಕಾಲಕ್ಕೆ ನಡೆಯಲಿರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಒಡಿಶಾ ಇತಿಹಾಸ ಸೃಷ್ಟಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ಮೋದಿ ಅವರು ಇಂದು (ಶನಿವಾರ) ಕಂಧಮಾಲ್, ಬೋಲಂಗಿರ್ ಹಾಗೂ ಬರ್ಗಢ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅದಕ್ಕೂ ಮುನ್ನ ಎಕ್ಸ್/ಟ್ವಿಟರ್ ವೇದಿಕೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಈ ಚುನಾವಣೆಗಳಲ್ಲಿ ಒಡಿಶಾ ಇತಿಹಾಸ ನಿರ್ಮಿಸಲಿದೆ ಎಂಬುದು ಸ್ಪಷ್ಟ' ಎಂದಿದ್ದಾರೆ.</p><p>ರಾಜ್ಯ ರಾಜಧಾನಿಯಲ್ಲಿ ಶುಕ್ರವಾರ ನಡೆಸಿದ ರೋಡ್ ಶೋ ದೃಶ್ಯಗಳನ್ನೂ ಅವರು ಹಂಚಿಕೊಂಡಿದ್ದಾರೆ.</p>.<p>ಪ್ರಚಾರದ ವೇಳೆ ಮೋದಿ, ಒಡಿಶಾದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.</p><p>ಒಡಿಶಾದಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ (ಬಿಜೆಡಿ) ಸರ್ಕಾರವು ಜನರೊಂದಿಗೆ ಸಂಪರ್ಕ ಕಡಿದುಕೊಂಡಿದೆ ಎಂದು ಆರೋಪಿಸಿದ್ದ ಮೋದಿ, ರಾಜ್ಯದ ಜನರೊಂದಿಗಿನ ತಮ್ಮ ಸಂಬಂಧವು ಭಾಷೆಯ ವ್ಯತ್ಯಾಸವನ್ನೂ ಮೀರಿ ನಿಕಟವಾಗಿದೆ ಎಂದಿದ್ದರು.</p><p>'ರಾಜ, ಮಹಾರಾಜರ ಕಾಲದಲ್ಲಿಯೂ, ಆಡಳಿತಗಾರರು ಮತ್ತು ಗ್ರಾಮೀಣ ಜನರು, ಸಾಮಾನ್ಯರ ನಡುವೆ ಬಾಂಧವ್ಯ ಇರುತ್ತಿತ್ತು. ಅದು ಈಗ ಒಡಿಶಾದಲ್ಲಿ ಸಂಪೂರ್ಣವಾಗಿ ಮಾಯವಾಗಿದೆ' ಎಂದು ಕಿಡಿಕಾರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ರಾಜ್ಯದಲ್ಲಿ ಏಕಕಾಲಕ್ಕೆ ನಡೆಯಲಿರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಒಡಿಶಾ ಇತಿಹಾಸ ಸೃಷ್ಟಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ಮೋದಿ ಅವರು ಇಂದು (ಶನಿವಾರ) ಕಂಧಮಾಲ್, ಬೋಲಂಗಿರ್ ಹಾಗೂ ಬರ್ಗಢ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅದಕ್ಕೂ ಮುನ್ನ ಎಕ್ಸ್/ಟ್ವಿಟರ್ ವೇದಿಕೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಈ ಚುನಾವಣೆಗಳಲ್ಲಿ ಒಡಿಶಾ ಇತಿಹಾಸ ನಿರ್ಮಿಸಲಿದೆ ಎಂಬುದು ಸ್ಪಷ್ಟ' ಎಂದಿದ್ದಾರೆ.</p><p>ರಾಜ್ಯ ರಾಜಧಾನಿಯಲ್ಲಿ ಶುಕ್ರವಾರ ನಡೆಸಿದ ರೋಡ್ ಶೋ ದೃಶ್ಯಗಳನ್ನೂ ಅವರು ಹಂಚಿಕೊಂಡಿದ್ದಾರೆ.</p>.<p>ಪ್ರಚಾರದ ವೇಳೆ ಮೋದಿ, ಒಡಿಶಾದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.</p><p>ಒಡಿಶಾದಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ (ಬಿಜೆಡಿ) ಸರ್ಕಾರವು ಜನರೊಂದಿಗೆ ಸಂಪರ್ಕ ಕಡಿದುಕೊಂಡಿದೆ ಎಂದು ಆರೋಪಿಸಿದ್ದ ಮೋದಿ, ರಾಜ್ಯದ ಜನರೊಂದಿಗಿನ ತಮ್ಮ ಸಂಬಂಧವು ಭಾಷೆಯ ವ್ಯತ್ಯಾಸವನ್ನೂ ಮೀರಿ ನಿಕಟವಾಗಿದೆ ಎಂದಿದ್ದರು.</p><p>'ರಾಜ, ಮಹಾರಾಜರ ಕಾಲದಲ್ಲಿಯೂ, ಆಡಳಿತಗಾರರು ಮತ್ತು ಗ್ರಾಮೀಣ ಜನರು, ಸಾಮಾನ್ಯರ ನಡುವೆ ಬಾಂಧವ್ಯ ಇರುತ್ತಿತ್ತು. ಅದು ಈಗ ಒಡಿಶಾದಲ್ಲಿ ಸಂಪೂರ್ಣವಾಗಿ ಮಾಯವಾಗಿದೆ' ಎಂದು ಕಿಡಿಕಾರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>