ನವದೆಹಲಿ: ಸಶಸ್ತ್ರ ಪಡೆಗಳ ವಿಚಾರವಾಗಿ ರಾಜಕೀಯ ಮಾಡಬೇಡಿ ಎಂದು ಚುನಾವಣಾ ಆಯೋಗವು ಸೂಚಿಸಿರುವುದಕ್ಕೆ ಶುಕ್ರವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ನ ಮಾಜಿ ಸೈನಿಕರ ವಿಭಾಗದ ಮುಖ್ಯಸ್ಥ ಕರ್ನಲ್ (ನಿವೃತ್ತ) ರೋಹಿತ್ ಚೌಧರಿ, ‘ನಾವು ಸಶಸ್ತ್ರ ಪಡೆಗಳನ್ನು ಟೀಕಿಸಿಲ್ಲ. ಸರ್ಕಾರದ ನೀತಿಗಳನ್ನಷ್ಟೇ ಪ್ರಶ್ನಿಸಿದ್ದೇವೆ’ ಎಂದು ಹೇಳಿದರು.