‘ಮೋದಿ, ವಿಜಯನ್ ನಡುವೆ ವ್ಯತಾಸವಿಲ್ಲ’
ಕಣ್ಣೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಬ್ಬರೂ ತಾವು ಒಂದೇ ರೀತಿಯವರಲ್ಲ ಎಂಬುದನ್ನು ಮನವರಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇವರಿಬ್ಬರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂಬುದು ಕೇರಳದ ಜನರಿಗೆ ಗೊತ್ತಿದೆ ಎಂದು ಕೇರಳ ವಿಧಾನಸಭೆಯ ವಿಪಕ್ಷ ನಾಯಕ ವಿ.ಡಿ. ಸತೀಶನ್ ಆರೋಪಿಸಿದರು.