ಜಮುಯಿ/ಬಂಕಾ: ಪ್ರಧಾನಿ ನರೇಂದ್ರ ಮೋದಿ ಅವರೇ ಮೂರನೇ ಬಾರಿಯೂ ಪ್ರಧಾನಿಯಾಗುತ್ತಾರೆ ಎಂಬ ನಂಬಿಕೆ ಜಗತ್ತಿಗಿದೆ. ಈ ವರ್ಷದ ಅಕ್ಟೋಬರ್ನಲ್ಲಿ ಮತ್ತು ಮುಂದಿನ ವರ್ಷ ವಿದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅವರನ್ನು ಈಗಾಗಲೇ ಆಹ್ವಾನಿಸಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದರು.
ಲೋಕ ಜನಶಕ್ತಿ ಪಕ್ಷ ಮತ್ತು ಜೆಡಿಯುನ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಆಡಳಿತದಲ್ಲಿ, ನಿರ್ದಿಷ್ಟ ದಾಳಿಯ ಮೂಲಕ ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸುವ ಶಕ್ತಿಯಾಗಿ ಭಾರತವು ರೂಪುಗೊಂಡಿದೆ ಎಂದರು.
ಕತಾರ್ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆಗೊಳಿಸಿರುವುದು ಭಾರತವು ಜಾಗತಿಕ ಶಕ್ತಿಯಾಗಿ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಎಂದು ಹೇಳಿದರು.