<p><strong>ಪಟ್ನಾ:</strong> ಪ್ರಧಾನಿ ಅವರನ್ನು ಗುರಿಯಾಗಿಸಿ ನಾನು ಯಾವುದೇ ಹೇಳಿಕೆ ನೀಡಿಲ್ಲ, ಅವರ ಕುರಿತಾದ ತಮ್ಮ ಹೇಳಿಕೆಯನ್ನ ತಿರುಚಲಾಗಿದೆ ಎಂದು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಹಿರಿಯ ಪುತ್ರಿ ಮೀಸಾ ಭಾರತಿ ಶುಕ್ರವಾರ ಹೇಳಿದ್ದಾರೆ.</p><p>ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ಅವರ ಜೈಲು ಸೇರಲಿದ್ದಾರೆ ಎಂದು ಮೀಸಾ ಅವರು ಹೇಳಿದ್ದಾಗಿ ವರದಿಯಾಗಿತ್ತು. ಪಾಟಲಿಪುತ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಅವರು ಈಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.</p><p>ಪ್ರಧಾನಿ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಿಲ್ಲ. ಮಾಧ್ಯಮಗಳು ನನ್ನ ಪೂರ್ಣ ಹೇಳಿಕೆಯನ್ನು ಪ್ರಸಾರ ಮಾಡದೆ, ತಿರುಚಿದ ತುಣಕನ್ನು ಮಾತ್ರ ಬಿತ್ತರಿಸಿವೆ. ಅದು ಬಿಜೆಪಿಯ ಕಾರ್ಯಸೂಚಿ’ ಎಂದು ಮೀಸಾ ಅವರು ಸ್ಪಷ್ಟನೆ ನೀಡಿದ್ದಾರೆ.</p><p>ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮತ್ತು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಬಗ್ಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಪ್ರಧಾನಿ ಅವರನ್ನು ಗುರಿಯಾಗಿಸಿ ನಾನು ಯಾವುದೇ ಹೇಳಿಕೆ ನೀಡಿಲ್ಲ, ಅವರ ಕುರಿತಾದ ತಮ್ಮ ಹೇಳಿಕೆಯನ್ನ ತಿರುಚಲಾಗಿದೆ ಎಂದು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಹಿರಿಯ ಪುತ್ರಿ ಮೀಸಾ ಭಾರತಿ ಶುಕ್ರವಾರ ಹೇಳಿದ್ದಾರೆ.</p><p>ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ಅವರ ಜೈಲು ಸೇರಲಿದ್ದಾರೆ ಎಂದು ಮೀಸಾ ಅವರು ಹೇಳಿದ್ದಾಗಿ ವರದಿಯಾಗಿತ್ತು. ಪಾಟಲಿಪುತ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಅವರು ಈಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.</p><p>ಪ್ರಧಾನಿ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಿಲ್ಲ. ಮಾಧ್ಯಮಗಳು ನನ್ನ ಪೂರ್ಣ ಹೇಳಿಕೆಯನ್ನು ಪ್ರಸಾರ ಮಾಡದೆ, ತಿರುಚಿದ ತುಣಕನ್ನು ಮಾತ್ರ ಬಿತ್ತರಿಸಿವೆ. ಅದು ಬಿಜೆಪಿಯ ಕಾರ್ಯಸೂಚಿ’ ಎಂದು ಮೀಸಾ ಅವರು ಸ್ಪಷ್ಟನೆ ನೀಡಿದ್ದಾರೆ.</p><p>ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮತ್ತು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಬಗ್ಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>