<p><strong>ಸೇಲಂ</strong>: ತಮಿಳುನಾಡಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಸೇಲಂ ಜಿಲ್ಲೆಯಲ್ಲಿ 10 ವರ್ಷಗಳ ಹಿಂದೆ ಹತ್ಯೆಯಾದ ಪಕ್ಷದ ಕಾರ್ಯಕರ್ತನನ್ನು ನೆನೆದು ಭಾವುಕರಾದರು. </p> <p>ಭಾರಿ ಸಂಖ್ಯೆಯಲ್ಲಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ದಿವಂಗತ ಬಿಜೆಪಿ ನಾಯಕ ಕೆ.ಎನ್. ಲಕ್ಷ್ಮಣ್ ಸೇರಿ ಜಿಲ್ಲೆಯಲ್ಲಿ ಪಕ್ಷಕ್ಕಾಗಿ ದುಡಿದ ಮೂವರನ್ನು ಪ್ರಮುಖವಾಗಿ ನೆನಪಿಸಿಕೊಂಡರು.</p><p>ದುಷ್ಕರ್ಮಿಗಳಿಂದ ಹತ್ಯೆಯಾದ ಆಡಿಟರ್ ರಮೇಶ್ ಕುರಿತಂತೆ ಮಾತನಾಡುವಾಗ ಭಾವುಕರಾದ ಮೋದಿ, ಕೆಲ ಸಮಯ ಭಾಷಣ ನಿಲ್ಲಿಸಿದರು. ಬಳಿಕ, ಮತ್ತೆ ಭಾಷಣ ಆರಂಭಿಸಿದ ಅವರು, ಪಕ್ಷಕ್ಕಾಗಿ ರಮೇಶ್ ಮಾಡಿದ ಕೆಲಸಗಳನ್ನು ಶ್ಲಾಘಿಸಿದರು.</p><p>‘ನಾನು ರಮೇಶ್ ಅವರನ್ನು ಎಂದಿಗೂ ಮರೆಯುವುದಿಲ್ಲ. ಪಕ್ಷಕ್ಕಾಗಿ ಅವರು ಹಗಲು–ರಾತ್ರಿ ಎನ್ನದೆ ಬಹಳಷ್ಟು ಶ್ರಮಿಸಿದ್ದಾರೆ. ಅವರೊಬ್ಬ ಒಳ್ಳೆಯ ವಾಗ್ಮಿಯಾಗಿದ್ದರು. ಆದರೆ, ಅವರನ್ನು ಹತ್ಯೆ ಮಾಡಲಾಯಿತು. ಇಂದು ಅವರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ’ ಎಂದು ಮೋದಿ ಹೇಳಿದರು.</p><p>ವೃತ್ತಿಯಲ್ಲಿ ಆಡಿಟರ್ ಆಗಿದ್ದ ವಿ. ರಮೇಶ್, ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿದ್ದರು. 2013ರ ಜುಲೈನಲ್ಲಿ ಅವರ ಮನೆಯಲ್ಲಿಯೇ ರಮೇಶ್ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು.</p><p>ದಿವಂಗತ ಕೆ.ಎನ್. ಲಕ್ಷ್ಮಣ್ ಅವರಿಗೂ ಶ್ರದ್ಧಾಂಜಲಿ ಅರ್ಪಿಸಿದ ಮೋದಿ, ತಮಿಳುನಾಡಿನಲ್ಲಿ ಪಕ್ಷದ ಬೆಳವಣಿಗೆಗೆ ಅವರ ಕೊಡುಗೆಯನ್ನು ಶ್ಲಾಘಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಲಂ</strong>: ತಮಿಳುನಾಡಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಸೇಲಂ ಜಿಲ್ಲೆಯಲ್ಲಿ 10 ವರ್ಷಗಳ ಹಿಂದೆ ಹತ್ಯೆಯಾದ ಪಕ್ಷದ ಕಾರ್ಯಕರ್ತನನ್ನು ನೆನೆದು ಭಾವುಕರಾದರು. </p> <p>ಭಾರಿ ಸಂಖ್ಯೆಯಲ್ಲಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ದಿವಂಗತ ಬಿಜೆಪಿ ನಾಯಕ ಕೆ.ಎನ್. ಲಕ್ಷ್ಮಣ್ ಸೇರಿ ಜಿಲ್ಲೆಯಲ್ಲಿ ಪಕ್ಷಕ್ಕಾಗಿ ದುಡಿದ ಮೂವರನ್ನು ಪ್ರಮುಖವಾಗಿ ನೆನಪಿಸಿಕೊಂಡರು.</p><p>ದುಷ್ಕರ್ಮಿಗಳಿಂದ ಹತ್ಯೆಯಾದ ಆಡಿಟರ್ ರಮೇಶ್ ಕುರಿತಂತೆ ಮಾತನಾಡುವಾಗ ಭಾವುಕರಾದ ಮೋದಿ, ಕೆಲ ಸಮಯ ಭಾಷಣ ನಿಲ್ಲಿಸಿದರು. ಬಳಿಕ, ಮತ್ತೆ ಭಾಷಣ ಆರಂಭಿಸಿದ ಅವರು, ಪಕ್ಷಕ್ಕಾಗಿ ರಮೇಶ್ ಮಾಡಿದ ಕೆಲಸಗಳನ್ನು ಶ್ಲಾಘಿಸಿದರು.</p><p>‘ನಾನು ರಮೇಶ್ ಅವರನ್ನು ಎಂದಿಗೂ ಮರೆಯುವುದಿಲ್ಲ. ಪಕ್ಷಕ್ಕಾಗಿ ಅವರು ಹಗಲು–ರಾತ್ರಿ ಎನ್ನದೆ ಬಹಳಷ್ಟು ಶ್ರಮಿಸಿದ್ದಾರೆ. ಅವರೊಬ್ಬ ಒಳ್ಳೆಯ ವಾಗ್ಮಿಯಾಗಿದ್ದರು. ಆದರೆ, ಅವರನ್ನು ಹತ್ಯೆ ಮಾಡಲಾಯಿತು. ಇಂದು ಅವರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ’ ಎಂದು ಮೋದಿ ಹೇಳಿದರು.</p><p>ವೃತ್ತಿಯಲ್ಲಿ ಆಡಿಟರ್ ಆಗಿದ್ದ ವಿ. ರಮೇಶ್, ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿದ್ದರು. 2013ರ ಜುಲೈನಲ್ಲಿ ಅವರ ಮನೆಯಲ್ಲಿಯೇ ರಮೇಶ್ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು.</p><p>ದಿವಂಗತ ಕೆ.ಎನ್. ಲಕ್ಷ್ಮಣ್ ಅವರಿಗೂ ಶ್ರದ್ಧಾಂಜಲಿ ಅರ್ಪಿಸಿದ ಮೋದಿ, ತಮಿಳುನಾಡಿನಲ್ಲಿ ಪಕ್ಷದ ಬೆಳವಣಿಗೆಗೆ ಅವರ ಕೊಡುಗೆಯನ್ನು ಶ್ಲಾಘಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>