‘ಸಂಘಟನೆಯ (ಎಐಪಿಸಿ) ಕಾರ್ಯವೈಖರಿಯಲ್ಲಿ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ಪ್ರಮುಖವಾಗಿ, ಚಾರ್ಟರ್ಡ್ ಅಕೌಂಟಂಟ್ಸ್ (ಸಿಎ), ಐಟಿ ವೃತ್ತಿಪರರು, ಶಿಕ್ಷಣ ತಜ್ಞರು, ಗಣಿ ಕಾರ್ಮಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ವೃತ್ತಿಪರರೊಂದಿಗೆ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನಡೆಸಿದ ಸಂವಾದಗಳ ಮೂಲಕ ಪಕ್ಷದ ಸಿದ್ಧಾಂತ–ನಿಲುವುಗಳನ್ನು ಜನರಿಗೆ ತಿಳಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.