ಮುಂಬೈ: ಮಹಾರಾಷ್ಟ್ರದ ಸಚಿವ ಸಂದೀಪನ್ ಭೂಮ್ರೆ ಅವರು ಔರಂಗಾಬಾದ್ ಲೋಕಸಭಾ ಕ್ಷೇತ್ರದಿಂದ (ಈಗಿನ ಛತ್ರಪತಿ ಸಂಭಾಜಿನಗರ) ಕಣಕ್ಕಿಳಿಯಲಿದ್ದಾರೆ ಎಂದು ಶಿವಸೇನಾ ಶನಿವಾರ ಘೋಷಿಸಿದೆ.
ಭೂಮ್ರೆ ಅವರು ಶಿವಸೇನಾ (ಯುಬಿಟಿ) ಅಭ್ಯರ್ಥಿ ಚಂದ್ರಕಾಂತ್ ಖೈರೆ ಮತ್ತು ಎಐಎಂಐಎಂ ಅಭ್ಯರ್ಥಿ ಇಮ್ತಿಯಾಜ್ ಜಲೀಲ್ ಅವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಇದರೊಂದಿಗೆ ಶಿವಸೇನಾ ಇದುವರೆಗೆ 11 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.