‘ನಾಮಪತ್ರ ತಿರಸ್ಕೃತಗೊಂಡ ಬಳಿಕ ನಿಮ್ಮ ವಾದವನ್ನು ಮಂಡಿಸಲು ಸಮಯಾವಕಾಶ ಕೊಟ್ಟಿದ್ದೆವು. ಆದರೆ ಪಕ್ಷದ ಶಿಸ್ತು ಸಮಿತಿ ಮುಂದೆ ಹಾಜರಾಗುವ ಬದಲು, ಯಾರ ಸಂಪರ್ಕಕ್ಕೂ ಸಿಗಲಿಲ್ಲ. ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ನೀವು ಹಾದಿಯೊದಗಿಸಿದ್ದೀರಿ. ಈ ಬೆಳವಣಿಗೆಯು ಸೂರತ್ನ ಜನರ ಮತದಾನದ ಹಕ್ಕನ್ನು ಕಸಿದುಕೊಂಡಿದೆ. ಜನರು ಹಾಗೂ ಪಕ್ಷದ ಕಾರ್ಯಕರ್ತರು ಕೋಪಗೊಂಡಿದ್ದು, ವಿವಿಧ ರೀತಿಯಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ. ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತು ಮಾಡಲು ಪಕ್ಷವು ನಿರ್ಧರಿಸಿದೆ’ ಎಂದು ಶಿಸ್ತು ಸಮಿತಿಯು ಕುಂಭಾನಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.