ಬಿಜೆಪಿ ಸೇರ್ಪಡೆ ಕುರಿತು ಡಿಎಂಕೆ ಮತ್ತು ಎಡಪಕ್ಷಗಳು ತಮಿಳ್ಇಸೈ ಅವರನ್ನು ಟೀಕಿಸಿವೆ. ಇದಕ್ಕೆ ತಿರುಗೇಟು ನೀಡಿದ ಅಣ್ಣಾಮಲೈ ‘ಉನ್ನತ ಹುದ್ದೆಯಲ್ಲಿರುವವರು ಅಧಿಕಾರವನ್ನು ತೊರೆದು ಸಾಮಾನ್ಯ ವ್ಯಕ್ತಿಯಾಗಿ ಸಾರ್ವಜನಿಕರಿಗಾಗಿ ಮತ್ತೆ ಕೆಲಸ ಮಾಡಲು ಆರಂಭಿಸುವುದು ಸಾಧ್ಯವಿರುವುದು ಬಿಜೆಪಿಯಲ್ಲಿ ಮಾತ್ರ’ ಎಂದು ಸಮರ್ಥಿಸಿಕೊಂಡರು.