<p><strong>ಚೆನ್ನೈ:</strong> ತೆಲಂಗಾಣ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳ್ಇಸೈ ಸೌಂದರರಾಜನ್ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.</p>.<p>ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ ತಮಿಳ್ ಇಸೈ ಬುಧವಾರ ಬಿಜೆಪಿ ಸೇರಿದರು. </p>.<p>ಬಿಜೆಪಿ ಸೇರ್ಪಡೆ ಕುರಿತು ಡಿಎಂಕೆ ಮತ್ತು ಎಡಪಕ್ಷಗಳು ತಮಿಳ್ಇಸೈ ಅವರನ್ನು ಟೀಕಿಸಿವೆ. ಇದಕ್ಕೆ ತಿರುಗೇಟು ನೀಡಿದ ಅಣ್ಣಾಮಲೈ ‘ಉನ್ನತ ಹುದ್ದೆಯಲ್ಲಿರುವವರು ಅಧಿಕಾರವನ್ನು ತೊರೆದು ಸಾಮಾನ್ಯ ವ್ಯಕ್ತಿಯಾಗಿ ಸಾರ್ವಜನಿಕರಿಗಾಗಿ ಮತ್ತೆ ಕೆಲಸ ಮಾಡಲು ಆರಂಭಿಸುವುದು ಸಾಧ್ಯವಿರುವುದು ಬಿಜೆಪಿಯಲ್ಲಿ ಮಾತ್ರ’ ಎಂದು ಸಮರ್ಥಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತೆಲಂಗಾಣ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳ್ಇಸೈ ಸೌಂದರರಾಜನ್ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.</p>.<p>ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ ತಮಿಳ್ ಇಸೈ ಬುಧವಾರ ಬಿಜೆಪಿ ಸೇರಿದರು. </p>.<p>ಬಿಜೆಪಿ ಸೇರ್ಪಡೆ ಕುರಿತು ಡಿಎಂಕೆ ಮತ್ತು ಎಡಪಕ್ಷಗಳು ತಮಿಳ್ಇಸೈ ಅವರನ್ನು ಟೀಕಿಸಿವೆ. ಇದಕ್ಕೆ ತಿರುಗೇಟು ನೀಡಿದ ಅಣ್ಣಾಮಲೈ ‘ಉನ್ನತ ಹುದ್ದೆಯಲ್ಲಿರುವವರು ಅಧಿಕಾರವನ್ನು ತೊರೆದು ಸಾಮಾನ್ಯ ವ್ಯಕ್ತಿಯಾಗಿ ಸಾರ್ವಜನಿಕರಿಗಾಗಿ ಮತ್ತೆ ಕೆಲಸ ಮಾಡಲು ಆರಂಭಿಸುವುದು ಸಾಧ್ಯವಿರುವುದು ಬಿಜೆಪಿಯಲ್ಲಿ ಮಾತ್ರ’ ಎಂದು ಸಮರ್ಥಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>