ಅನುರಾಗ್ ನಾಮಪತ್ರ ಸಲ್ಲಿಸುವಾಗ ಅವರ ಸಹೋದರ, ಇಂಡಿಯನ್ ಪ್ರೀಮಿಯರ್ ಲೀಗ್ ಮುಖ್ಯಸ್ಥ ಅರುಣ್ ಧುಮಾಲ್ ಹಾಗೂ ಬಿಜೆಪಿ ಮುಖಂಡರು ಜತೆಗಿದ್ದರು. ಅನುರಾಗ್ ಅವರು ಹಿಮಾಚಲ ಪ್ರದೇಶದ ಹಮೀರ್ಪುರ ಕ್ಷೇತ್ರದಿಂದ ಐದನೇ ಬಾರಿ ಅಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಅವಾಹದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರಲ್ಲದೆ, ಹಲವು ಕಡೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡರು.