<p><strong>ಮುಜಫರ್ನಗರ:</strong> ರಜಪೂತರು ಮಹಾಪಂಚಾಯತ್ ನಡೆಸಿ ಮುಜಫರ್ನಗರ, ಕೈರಾನ ಮತ್ತು ಸಹರಣ್ಪುರ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ಸಮುದಾಯದ ಮುಖಂಡರೊಬ್ಬರು ಬುಧವಾರ ತಿಳಿಸಿದ್ದಾರೆ. </p>.<p>ಕಿಸಾನ್ ಮಜ್ದೂರ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಮುದಾಯದ ಮುಖಂಡ ಠಾಕೂರ್ ಪೂರನ್ ಸಿಂಗ್ ಮಂಗಳವಾರ ಖೇಡದಲ್ಲಿ ಮಹಾಪಂಚಾಯತ್ಗೆ ಕರೆ ನೀಡಿದ್ದರು. ಅದರಲ್ಲಿ ಮುಜಫರ್ನಗರ ಕ್ಷೇತ್ರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಚೌಬಿಸ ರಜಪೂತ ಸಮುದಾಯದವರು ಭಾಗವಹಿಸಿದ್ದರು.</p>.<p>‘ಬಿಜೆಪಿಯು ಟಿಕೆಟ್ ವಿತರಣೆಯಲ್ಲಿ ಸಮುದಾಯವನ್ನು ನಿರ್ಲಕ್ಷಿಸಿದ್ದರ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಬಹಿಷ್ಕಾರ ಹಾಕಲಾಗಿದೆ. ಈ ಪ್ರದೇಶಗಳ ರಜಪೂತ ಸಮುದಾಯದ ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಮತ ಚಲಾಯಿಸುವುದಿಲ್ಲ. ಅವರ ಬದಲು ಇತರೆ ಪಕ್ಷಗಳ ಪ್ರಬಲ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ’ ಎಂದು ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಜಫರ್ನಗರ:</strong> ರಜಪೂತರು ಮಹಾಪಂಚಾಯತ್ ನಡೆಸಿ ಮುಜಫರ್ನಗರ, ಕೈರಾನ ಮತ್ತು ಸಹರಣ್ಪುರ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ಸಮುದಾಯದ ಮುಖಂಡರೊಬ್ಬರು ಬುಧವಾರ ತಿಳಿಸಿದ್ದಾರೆ. </p>.<p>ಕಿಸಾನ್ ಮಜ್ದೂರ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಮುದಾಯದ ಮುಖಂಡ ಠಾಕೂರ್ ಪೂರನ್ ಸಿಂಗ್ ಮಂಗಳವಾರ ಖೇಡದಲ್ಲಿ ಮಹಾಪಂಚಾಯತ್ಗೆ ಕರೆ ನೀಡಿದ್ದರು. ಅದರಲ್ಲಿ ಮುಜಫರ್ನಗರ ಕ್ಷೇತ್ರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಚೌಬಿಸ ರಜಪೂತ ಸಮುದಾಯದವರು ಭಾಗವಹಿಸಿದ್ದರು.</p>.<p>‘ಬಿಜೆಪಿಯು ಟಿಕೆಟ್ ವಿತರಣೆಯಲ್ಲಿ ಸಮುದಾಯವನ್ನು ನಿರ್ಲಕ್ಷಿಸಿದ್ದರ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಬಹಿಷ್ಕಾರ ಹಾಕಲಾಗಿದೆ. ಈ ಪ್ರದೇಶಗಳ ರಜಪೂತ ಸಮುದಾಯದ ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಮತ ಚಲಾಯಿಸುವುದಿಲ್ಲ. ಅವರ ಬದಲು ಇತರೆ ಪಕ್ಷಗಳ ಪ್ರಬಲ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ’ ಎಂದು ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>