ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಿಸಿಸಿ ಅಧ್ಯಕ್ಷ ಕರಣ್ ಮಹರಾ ಮತ್ತು ಪಕ್ಷದ ಉತ್ತರಾಖಂಡ ಉಸ್ತುವಾರಿ ಕುಮಾರಿ ಶೆಲ್ಜಾ ಅವರಿಗೆ ರಾಜೀನಾಮೆ ಪತ್ರ ಕಳಿಸಿರುವ ರಸ್ತೋಗಿ, ‘ಉತ್ತರಾಖಂಡ ಕಾಂಗ್ರೆಸ್ ಮುಖಂಡರು ಗುಂಪುಗಾರಿಕೆಯಲ್ಲಿ ತೊಡಗಿದ್ದು, ಟಿಕಟ್ ಮಾರಾಟದಲ್ಲಿ ನಿರತರಾಗಿದ್ದಾರೆ. ಇವನ್ನು ಹತೋಟಿಗೆ ತರದಿದ್ದರೆ ಪಕ್ಷವು ವಿರೋಧ ಪಕ್ಷವಾಗಿಯೂ ಉಳಿಯುವುದಿಲ್ಲ’ ಎಂದಿದ್ದಾರೆ.