ಕಂದಾಯ ಇಲಾಖೆ ಅಧಿಕಾರಿಗಳು ಈ ಗ್ರಾಮಗಳಿಗೆ ಭೇಟಿ ನೀಡಿ ಮತದಾರರ ಮನವೊಲಿಸುವ ಯತ್ನ ನಡೆಸಿದರು. ಅಧಿಕಾರಿಗಳನ್ನು ಸುತ್ತುವರಿದ ಗ್ರಾಮಸ್ಥರು, ಇದನ್ನು ವಿರೋಧಿಸಿದರು.
ಗ್ರಾಮಸ್ಥರು ತೋಳಿಗೆ ಕಪ್ಪು ಪಟ್ಟಿ ಧರಿಸಿ, ಕೆಲವರು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟಿಸಿದರು. ನ್ಯಾಯಕ್ಕಾಗಿ ಬೇಡಿಕೆ ಇಟ್ಟು ಅಧಿಕಾರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸಿದರು.
ಇದೇ ಗ್ರಾಮದಲ್ಲಿ 2022ರಲ್ಲಿ ಸಂಭವಿಸಿದ ಕುಡಿಯುವ ನೀರಿಗೆ ಮಲ ಬೆರೆಸಿದ ಪ್ರಕರಣ ಈಗಲೂ ತನಿಖೆಯ ಹಂತದಲ್ಲಿದೆ.
ಇದೇ ರೀತಿ ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಮಿಳುನಾಡಿನ ಶ್ರೀರಂಗಂಪಟ್ಟಿ, ದಿಂಡಿಗಲ್ ಜಿಲ್ಲೆಯ ಕೆಲ ಗ್ರಾಮಗಳು, ತೂತುಕುಡಿ ಜಿಲ್ಲೆಯ ಕೆಲ ಗ್ರಾಮಗಳ ಮತದಾರರು ಚುನಾವಣೆ ಬಹಿಷ್ಕರಿಸಿದ್ದಾರೆ. ಕೆಲವೆಡೆ ಪೊಲೀಸ್ ಮೇಲೆ ಕಲ್ಲು ತೂರಾಟವೂ ನಡೆದಿರುವ ಕುರಿತು ವರದಿಯಾಗಿದೆ.
ಮತದಾರರ ಪಟ್ಟಿಯಿಂದ ಹೆಸರು ಬಿಟ್ಟುಹೋಗಿರುವ ಪ್ರಕರಣಗಳ ಕುರಿತು ಮಹತಾನಪುರಂ ಎಂಬಲ್ಲಿ ದೂರು ಸಲ್ಲಿಕೆಯಾಗಿದೆ.