<p><strong>ಠಾಣೆ</strong>: ಲೋಕಸಭಾ ಚುನಾವಣೆಯಲ್ಲಿ ‘ಮಹಾಯುತಿ’ ಮೈತ್ರಿಕೂಟವು ವಿರೋಧ ಪಕ್ಷದ ಒಕ್ಕೂಟಕ್ಕಿಂತ ಮುಂದಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಬುಧವಾರ ಅಭಿಪ್ರಾಯ ಪಟ್ಟರು.</p>.<p>‘ಮನೆಯಲ್ಲಿ ಕುಳಿತು ಫೇಸ್ಬುಕ್ ಲೈವ್ ಮೂಲಕ ಆಡಳಿತ ನಡೆಸುವವರು ಮತ್ತು ಜನರ ಬಳಿಗೆ ತೆರಳಿ ಆಡಳಿತ ನಡೆಸುವವರ ಪೈಕಿ ಯಾರನ್ನು ಆಯ್ಕೆ ಮಾಡಬೇಕು ಎಂದು ಜನರಿಗೆ ತಿಳಿದಿದೆ’ ಎಂದು ಹೇಳಿದರು.</p>.<p>‘ಹಿಂದಿನ ಸರ್ಕಾರದ ಅವಧಿಯಲ್ಲಿ ಏನೂ ಕೆಲಸ ಆಗಿಲ್ಲ. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಫೇಸ್ಬುಕ್ ಲೈವ್ನಲ್ಲಿ ನಡೆಯುತ್ತಿತ್ತು. ಮುಖ್ಯಮಂತ್ರಿಯು ಕೇವಲ ಎರಡು ದಿನ ಸಚಿವಾಲಯಕ್ಕೆ ತೆರಳಿ ಸರ್ಕಾರ ನಡೆಸಬಹುದೇ’ ಎಂದು ಅವರು ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಪ್ರಶ್ನಿಸಿದರು.</p>.<p>ಆಡಳಿತಾರೂಢ ಪಕ್ಷದ ಕಾರ್ಯವೈಖರಿಯನ್ನು ಕಂಡು ಜನರು ಮತ ಹಾಕಿದ್ದಾರೆ ಎಂದೂ ತಿಳಿಸಿದರು.</p>.<p>‘ಲೋಕಸಭಾ ಚುನಾವಣೆಯಲ್ಲಿ ‘ಮಹಾಯುತಿ’ ಕೂಟಕ್ಕೆ ಸ್ಪಷ್ಟ ಬಹುಮತ ಲಭಿಸಲಿದೆ. ನಮ್ಮ ಸರ್ಕಾರವು ಎರಡು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರು ಮೆಚ್ಚಿದ್ದಾರೆ’ ಎಂದು ಶಿಂದೆ ವಿವರಿಸಿದರು.</p>.<p>‘ಕೇಂದ್ರ ಮತ್ತು ರಾಜ್ಯದ ಡಬಲ್ ಎಂಜಿನ್ ಸರ್ಕಾರವು ಚೆನ್ನಾಗಿ ಕೆಲಸ ಮಾಡಿದೆ. ರೈಲ್ವೆ, ರಸ್ತೆ, ನಗರಾಭಿವೃದ್ಧಿ ಮತ್ತು ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ</strong>: ಲೋಕಸಭಾ ಚುನಾವಣೆಯಲ್ಲಿ ‘ಮಹಾಯುತಿ’ ಮೈತ್ರಿಕೂಟವು ವಿರೋಧ ಪಕ್ಷದ ಒಕ್ಕೂಟಕ್ಕಿಂತ ಮುಂದಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಬುಧವಾರ ಅಭಿಪ್ರಾಯ ಪಟ್ಟರು.</p>.<p>‘ಮನೆಯಲ್ಲಿ ಕುಳಿತು ಫೇಸ್ಬುಕ್ ಲೈವ್ ಮೂಲಕ ಆಡಳಿತ ನಡೆಸುವವರು ಮತ್ತು ಜನರ ಬಳಿಗೆ ತೆರಳಿ ಆಡಳಿತ ನಡೆಸುವವರ ಪೈಕಿ ಯಾರನ್ನು ಆಯ್ಕೆ ಮಾಡಬೇಕು ಎಂದು ಜನರಿಗೆ ತಿಳಿದಿದೆ’ ಎಂದು ಹೇಳಿದರು.</p>.<p>‘ಹಿಂದಿನ ಸರ್ಕಾರದ ಅವಧಿಯಲ್ಲಿ ಏನೂ ಕೆಲಸ ಆಗಿಲ್ಲ. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಫೇಸ್ಬುಕ್ ಲೈವ್ನಲ್ಲಿ ನಡೆಯುತ್ತಿತ್ತು. ಮುಖ್ಯಮಂತ್ರಿಯು ಕೇವಲ ಎರಡು ದಿನ ಸಚಿವಾಲಯಕ್ಕೆ ತೆರಳಿ ಸರ್ಕಾರ ನಡೆಸಬಹುದೇ’ ಎಂದು ಅವರು ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಪ್ರಶ್ನಿಸಿದರು.</p>.<p>ಆಡಳಿತಾರೂಢ ಪಕ್ಷದ ಕಾರ್ಯವೈಖರಿಯನ್ನು ಕಂಡು ಜನರು ಮತ ಹಾಕಿದ್ದಾರೆ ಎಂದೂ ತಿಳಿಸಿದರು.</p>.<p>‘ಲೋಕಸಭಾ ಚುನಾವಣೆಯಲ್ಲಿ ‘ಮಹಾಯುತಿ’ ಕೂಟಕ್ಕೆ ಸ್ಪಷ್ಟ ಬಹುಮತ ಲಭಿಸಲಿದೆ. ನಮ್ಮ ಸರ್ಕಾರವು ಎರಡು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರು ಮೆಚ್ಚಿದ್ದಾರೆ’ ಎಂದು ಶಿಂದೆ ವಿವರಿಸಿದರು.</p>.<p>‘ಕೇಂದ್ರ ಮತ್ತು ರಾಜ್ಯದ ಡಬಲ್ ಎಂಜಿನ್ ಸರ್ಕಾರವು ಚೆನ್ನಾಗಿ ಕೆಲಸ ಮಾಡಿದೆ. ರೈಲ್ವೆ, ರಸ್ತೆ, ನಗರಾಭಿವೃದ್ಧಿ ಮತ್ತು ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>