<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಕುಟುಂಬದ ರಾಜಕೀಯ ಪರಂಪರೆ ಅವಲಂಭಿಸಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ (ಡಿಪಿಎಪಿ) ಮುಖಂಡ ಗುಲಾಂ ನಬಿ ಆಜಾದ್ ಟೀಕಿಸಿದ್ದಾರೆ.</p><p>ಪಕ್ಷದ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು ಕಾಶ್ಮೀರದಲ್ಲಿ ಒಮರ್ ಅಬ್ದುಲ್ಲಾ ಹಾಗೂ ರಾಹುಲ್ ಗಾಂಧಿ ತಮ್ಮ ರಾಜಕೀಯ ಪರಂಪರೆಯನ್ನು ಅವಲಂಭಿಸಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ.</p><p>ರಾಹುಲ್ ಗಾಂಧಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸುರಕ್ಷಿತ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅದರಲ್ಲೂ ಅಲ್ಪಸಂಖ್ಯಾತರು ಪ್ರಾಬಲ್ಯವಿರುವ ಸ್ಥಳಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಅವರು ಯಾಕೆ ಸ್ಪರ್ಧೆ ಮಾಡುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ?</p><p>ಬಿಜೆಪಿ ವಿರುದ್ಧ ಹೋರಾಡುತ್ತೇನೆ ಎಂದು ರಾಹುಲ್ ಹೇಳಿಕೊಳ್ಳುತ್ತಾರೆ, ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳನ್ನು ಹೊರತುಪಡಿಸಿ ಅಲ್ಪಸಂಖ್ಯಾತ ಪ್ರಾಬಲ್ಯದ ರಾಜ್ಯಗಳಲ್ಲಿ ಏಕೆ ಆಶ್ರಯ ಪಡೆಯಬೇಕು ಎಂದು ಪ್ರಶ್ನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಕುಟುಂಬದ ರಾಜಕೀಯ ಪರಂಪರೆ ಅವಲಂಭಿಸಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ (ಡಿಪಿಎಪಿ) ಮುಖಂಡ ಗುಲಾಂ ನಬಿ ಆಜಾದ್ ಟೀಕಿಸಿದ್ದಾರೆ.</p><p>ಪಕ್ಷದ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು ಕಾಶ್ಮೀರದಲ್ಲಿ ಒಮರ್ ಅಬ್ದುಲ್ಲಾ ಹಾಗೂ ರಾಹುಲ್ ಗಾಂಧಿ ತಮ್ಮ ರಾಜಕೀಯ ಪರಂಪರೆಯನ್ನು ಅವಲಂಭಿಸಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ.</p><p>ರಾಹುಲ್ ಗಾಂಧಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸುರಕ್ಷಿತ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅದರಲ್ಲೂ ಅಲ್ಪಸಂಖ್ಯಾತರು ಪ್ರಾಬಲ್ಯವಿರುವ ಸ್ಥಳಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಅವರು ಯಾಕೆ ಸ್ಪರ್ಧೆ ಮಾಡುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ?</p><p>ಬಿಜೆಪಿ ವಿರುದ್ಧ ಹೋರಾಡುತ್ತೇನೆ ಎಂದು ರಾಹುಲ್ ಹೇಳಿಕೊಳ್ಳುತ್ತಾರೆ, ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳನ್ನು ಹೊರತುಪಡಿಸಿ ಅಲ್ಪಸಂಖ್ಯಾತ ಪ್ರಾಬಲ್ಯದ ರಾಜ್ಯಗಳಲ್ಲಿ ಏಕೆ ಆಶ್ರಯ ಪಡೆಯಬೇಕು ಎಂದು ಪ್ರಶ್ನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>