<p><strong>ಜೈಪುರ:</strong> ಕಳೆದ 10 ವರ್ಷಗಳಲ್ಲಿ ನಮ್ಮ (ಬಿಜೆಪಿ) ಸರ್ಕಾರ ಮಾಡಿರುವ ಕೆಲಸಗಳು ಕೇವಲ ಟ್ರೇಲರ್ ಮಾತ್ರವಾಗಿದ್ದು, ಇನ್ನೂ ಬಹಳಷ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. </p><p>ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದು, ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗುವ ಗುರಿಯನ್ನು ಹೊಂದಿದ್ದಾರೆ. </p><p>ರಾಜಸ್ಥಾನದ ಚುರು ಪ್ರದೇಶದಲ್ಲಿ ನಡೆದ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ ಅವರು, ಎಷ್ಟೇ ಅಭಿವೃದ್ಧಿ ಕಾರ್ಯಗಳು ನಡೆದರೂ, ಇಲ್ಲಿಯವರೆಗೆ ನಡೆದಿರುವುದು ಬರಿ ಟ್ರೇಲರ್ ಮಾತ್ರ. ಇನ್ನೂ ಬಹಳಷ್ಟಿದೆ ಎಂದು ಹೇಳಿದ್ದಾರೆ. </p><p>ಮಾಡಬೇಕಾದ ಕೆಲಸ ಬಹಳಷ್ಟಿವೆ. ಕನಸುಗಳು ಸಾಕಷ್ಟಿವೆ. ನಾವು ದೇಶವನ್ನು ಬಹಳ ಮುಂದಕ್ಕೆ ಕೊಂಡೊಯ್ಯಬೇಕಿದೆ ಎಂದು ಅವರು ಹೇಳಿದ್ದಾರೆ. </p><p>ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟದ ವಿರುದ್ಧವೂ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಈ ಮೈತ್ರಿಕೂಟಕ್ಕೆ ತಮ್ಮದೇ ಆದ ಹಿತಾಸಕ್ತಿಗಳಿವೆ. ಬಡವರು, ದಲಿತರು, ಹಿಂದುಳಿದ ವರ್ಗದವರ ಕಲ್ಯಾಣಕ್ಕೆ ಆದ್ಯತೆ ಕೊಡುವುದಿಲ್ಲ ಎಂದು ಆರೋಪಿಸಿದರು. </p><p>ದೇಶವನ್ನು ವಿಭಜಿಸಲು ಮತ್ತು ಸೇನೆಯನ್ನು ಅವಮಾನಿಸಲು ಕಾಂಗ್ರೆಸ್ ಹೆಸರುವಾಸಿಯಾಗಿದೆ ಎಂದು ಅವರು ಟೀಕಿಸಿದರು. </p><p>'ತ್ರಿವಳಿ ತಲಾಖ್' ರದ್ದು ಮಾಡುವ ಮೂಲಕ ಮುಸ್ಲಿಂ ಸಹೋದರಿಯರೊಂದಿಗೆ ಮುಸ್ಲಿಂ ಕುಟುಂಬಗಳನ್ನು ರಕ್ಷಿಸಲು ಸಾಧ್ಯವಾಯಿತು ಎಂದು ಅವರು ಉಲ್ಲೇಖಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕಳೆದ 10 ವರ್ಷಗಳಲ್ಲಿ ನಮ್ಮ (ಬಿಜೆಪಿ) ಸರ್ಕಾರ ಮಾಡಿರುವ ಕೆಲಸಗಳು ಕೇವಲ ಟ್ರೇಲರ್ ಮಾತ್ರವಾಗಿದ್ದು, ಇನ್ನೂ ಬಹಳಷ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. </p><p>ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದು, ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗುವ ಗುರಿಯನ್ನು ಹೊಂದಿದ್ದಾರೆ. </p><p>ರಾಜಸ್ಥಾನದ ಚುರು ಪ್ರದೇಶದಲ್ಲಿ ನಡೆದ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ ಅವರು, ಎಷ್ಟೇ ಅಭಿವೃದ್ಧಿ ಕಾರ್ಯಗಳು ನಡೆದರೂ, ಇಲ್ಲಿಯವರೆಗೆ ನಡೆದಿರುವುದು ಬರಿ ಟ್ರೇಲರ್ ಮಾತ್ರ. ಇನ್ನೂ ಬಹಳಷ್ಟಿದೆ ಎಂದು ಹೇಳಿದ್ದಾರೆ. </p><p>ಮಾಡಬೇಕಾದ ಕೆಲಸ ಬಹಳಷ್ಟಿವೆ. ಕನಸುಗಳು ಸಾಕಷ್ಟಿವೆ. ನಾವು ದೇಶವನ್ನು ಬಹಳ ಮುಂದಕ್ಕೆ ಕೊಂಡೊಯ್ಯಬೇಕಿದೆ ಎಂದು ಅವರು ಹೇಳಿದ್ದಾರೆ. </p><p>ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟದ ವಿರುದ್ಧವೂ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಈ ಮೈತ್ರಿಕೂಟಕ್ಕೆ ತಮ್ಮದೇ ಆದ ಹಿತಾಸಕ್ತಿಗಳಿವೆ. ಬಡವರು, ದಲಿತರು, ಹಿಂದುಳಿದ ವರ್ಗದವರ ಕಲ್ಯಾಣಕ್ಕೆ ಆದ್ಯತೆ ಕೊಡುವುದಿಲ್ಲ ಎಂದು ಆರೋಪಿಸಿದರು. </p><p>ದೇಶವನ್ನು ವಿಭಜಿಸಲು ಮತ್ತು ಸೇನೆಯನ್ನು ಅವಮಾನಿಸಲು ಕಾಂಗ್ರೆಸ್ ಹೆಸರುವಾಸಿಯಾಗಿದೆ ಎಂದು ಅವರು ಟೀಕಿಸಿದರು. </p><p>'ತ್ರಿವಳಿ ತಲಾಖ್' ರದ್ದು ಮಾಡುವ ಮೂಲಕ ಮುಸ್ಲಿಂ ಸಹೋದರಿಯರೊಂದಿಗೆ ಮುಸ್ಲಿಂ ಕುಟುಂಬಗಳನ್ನು ರಕ್ಷಿಸಲು ಸಾಧ್ಯವಾಯಿತು ಎಂದು ಅವರು ಉಲ್ಲೇಖಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>