<p><strong>ಕಡಪ:</strong> ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ, ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಬಿಜೆಪಿಯ ‘ಬಿ’ ಟೀಂ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.</p><p>ಕಡಪದಲ್ಲಿ ಶನಿವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಆಡಳಿತಾರೂಢ ವೈಎಸ್ಆರ್ಸಿಪಿ ಮತ್ತು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.</p><p>ಇಂದು ಆಂಧ್ರಪ್ರದೇಶದ ಆಡಳಿತವು ಬಿಜೆಪಿಯ ‘ಬಿ’ ಟೀಂನ ಕೈಯಲ್ಲಿದೆ. ಬಿಜೆಪಿಯ ‘ಬಿ’ ಎಂದರೆ ಇಲ್ಲಿ ‘ಬಾಬು’ (ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು), ‘ಜೆ’ ಎಂದರೆ ಜಗನ್, ‘ಪಿ’ ಎಂದರೆ ಪವನ್ (ಜನಸೇನಾ ಪಕ್ಷದ ಸ್ಥಾಪಕ ಪವನ್ ಕಲ್ಯಾಣ್) ಎಂದು ದೂರಿದರು. ಈ ಮೂವರು ನಾಯಕರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿದೆ ಎಂದು ಆರೋಪಿಸಿದರು.</p><p>ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ (ವೈಎಸ್ಆರ್) ಅವರ ಹೆಸರು ಪ್ರಸ್ತಾಪಿಸಿದ ರಾಹುಲ್, ‘ವೈಎಸ್ಆರ್ ಅವರು ಆಂಧ್ರಪ್ರದೇಶದಲ್ಲಿ ನಡೆಸಿದ್ದ ಪಾದಯಾತ್ರೆಯು ನನ್ನ ಭಾರತ್ ಜೋಡೊ ಯಾತ್ರೆಗೆ ಸ್ಫೂರ್ತಿಯಾಯಿತು’ ಎಂದರು.</p><p>‘ಇಂಡಿಯಾ’ ಮೈತ್ರಿಕೂಟವು ಅಧಿಕಾರಕ್ಕೆ ಬಂದ ಕೂಡಲೇ ಆಂಧ್ರಪ್ರದೇಶಕ್ಕೆ 10 ವರ್ಷಗಳ ಕಾಲ ವಿಶೇಷ ಸ್ಥಾನಮಾನ ನೀಡಲಾಗುವುದು ಹಾಗೂ ಪೋಲವರಂ ಯೋಜನೆ ಮತ್ತು ಕಡಪ ಉಕ್ಕಿನ ಘಟಕ ಸೇರಿದಂತೆ ಇತರ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡಪ:</strong> ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ, ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಬಿಜೆಪಿಯ ‘ಬಿ’ ಟೀಂ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.</p><p>ಕಡಪದಲ್ಲಿ ಶನಿವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಆಡಳಿತಾರೂಢ ವೈಎಸ್ಆರ್ಸಿಪಿ ಮತ್ತು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.</p><p>ಇಂದು ಆಂಧ್ರಪ್ರದೇಶದ ಆಡಳಿತವು ಬಿಜೆಪಿಯ ‘ಬಿ’ ಟೀಂನ ಕೈಯಲ್ಲಿದೆ. ಬಿಜೆಪಿಯ ‘ಬಿ’ ಎಂದರೆ ಇಲ್ಲಿ ‘ಬಾಬು’ (ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು), ‘ಜೆ’ ಎಂದರೆ ಜಗನ್, ‘ಪಿ’ ಎಂದರೆ ಪವನ್ (ಜನಸೇನಾ ಪಕ್ಷದ ಸ್ಥಾಪಕ ಪವನ್ ಕಲ್ಯಾಣ್) ಎಂದು ದೂರಿದರು. ಈ ಮೂವರು ನಾಯಕರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿದೆ ಎಂದು ಆರೋಪಿಸಿದರು.</p><p>ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ (ವೈಎಸ್ಆರ್) ಅವರ ಹೆಸರು ಪ್ರಸ್ತಾಪಿಸಿದ ರಾಹುಲ್, ‘ವೈಎಸ್ಆರ್ ಅವರು ಆಂಧ್ರಪ್ರದೇಶದಲ್ಲಿ ನಡೆಸಿದ್ದ ಪಾದಯಾತ್ರೆಯು ನನ್ನ ಭಾರತ್ ಜೋಡೊ ಯಾತ್ರೆಗೆ ಸ್ಫೂರ್ತಿಯಾಯಿತು’ ಎಂದರು.</p><p>‘ಇಂಡಿಯಾ’ ಮೈತ್ರಿಕೂಟವು ಅಧಿಕಾರಕ್ಕೆ ಬಂದ ಕೂಡಲೇ ಆಂಧ್ರಪ್ರದೇಶಕ್ಕೆ 10 ವರ್ಷಗಳ ಕಾಲ ವಿಶೇಷ ಸ್ಥಾನಮಾನ ನೀಡಲಾಗುವುದು ಹಾಗೂ ಪೋಲವರಂ ಯೋಜನೆ ಮತ್ತು ಕಡಪ ಉಕ್ಕಿನ ಘಟಕ ಸೇರಿದಂತೆ ಇತರ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>