<p><strong>ನವದೆಹಲಿ (ಪಿಟಿಐ): </strong>ಕಾಂಗ್ರೆಸ್ ಸಂಸದ ಹಾಗೂ ಜಿಂದಾಲ್ ಸ್ಟೀಲ್ ಆಂಡ್ ಪವರ್ನ ಅಧ್ಯಕ್ಷ ನವೀನ್ ಜಿಂದಾಲ್ ಅವರು ಎರಡು ಸುದ್ದಿ ವಾಹಿನಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಮಂಗಳವಾರ ದೂರು ನೀಡಿದ್ದಾರೆ.<br /> <br /> ಒಂದೇ ಸಮೂಹಕ್ಕೆ ಸೇರಿದ ಎರಡೂ ವಾಹಿನಿಗಳು ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿವೆ ಎಂದು ಜಿಂದಾಲ್ ಆಪಾದಿಸಿದ್ದಾರೆ.<br /> ‘ಚುನಾವಣಾ ನೀತಿ ಸಂಹಿತೆ ಜಾರಿಯಾದ, ಅಂದರೆ ಮಾರ್ಚ್ 5ರ ನಂತರ ಆ ವಾಹಿನಿಗಳು ನನ್ನ ವಿರುದ್ಧ 85 ಸುಳ್ಳು ಸುದ್ದಿಗಳನ್ನು ಪ್ರಕಟಿಸಿವೆ.</p>.<p>ನಾವು ಇಂದು ಚುನಾವಣಾ ಆಯೋಗವನ್ನು ಸಂಪರ್ಕಿಸಿದ್ದು, ಈ ದುರುದ್ದೇಶ ಪೂರಿತ ಪ್ರಚಾರವನ್ನು ತಡೆಯುವಂತೆ ಮನವಿ ಮಾಡಿದ್ದೇವೆ’ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್. ಸಂಪತ್ ಮತ್ತು ಇತರ ಅಧಿಕಾರಿಗಳನ್ನು ಭೇಟಿಯಾದ ಬಳಿಕ ಜಿಂದಾಲ್ ಸುದ್ದಿಗಾರರಿಗೆ ತಿಳಿಸಿದರು.<br /> <br /> ತಮ್ಮ ಪರವಾಗಿ ಸುದ್ದಿ ಪ್ರಸಾರ ಮಾಡಲು ಈ ವಾಹಿನಿಗಳು ₨100 ಕೋಟಿಗಳನ್ನು ನೀಡುವಂತೆ ಬೇಡಿಕೆ ಇಟ್ಟಿದ್ದನ್ನು ತಾವು ಬಯಲಿಗೆಳೆದ ಬಳಿಕ, ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿವೆ ಎಂದು ಹರಿಯಾಣದ ಕುರುಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ನವೀನ್ ಜಿಂದಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಕಾಂಗ್ರೆಸ್ ಸಂಸದ ಹಾಗೂ ಜಿಂದಾಲ್ ಸ್ಟೀಲ್ ಆಂಡ್ ಪವರ್ನ ಅಧ್ಯಕ್ಷ ನವೀನ್ ಜಿಂದಾಲ್ ಅವರು ಎರಡು ಸುದ್ದಿ ವಾಹಿನಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಮಂಗಳವಾರ ದೂರು ನೀಡಿದ್ದಾರೆ.<br /> <br /> ಒಂದೇ ಸಮೂಹಕ್ಕೆ ಸೇರಿದ ಎರಡೂ ವಾಹಿನಿಗಳು ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿವೆ ಎಂದು ಜಿಂದಾಲ್ ಆಪಾದಿಸಿದ್ದಾರೆ.<br /> ‘ಚುನಾವಣಾ ನೀತಿ ಸಂಹಿತೆ ಜಾರಿಯಾದ, ಅಂದರೆ ಮಾರ್ಚ್ 5ರ ನಂತರ ಆ ವಾಹಿನಿಗಳು ನನ್ನ ವಿರುದ್ಧ 85 ಸುಳ್ಳು ಸುದ್ದಿಗಳನ್ನು ಪ್ರಕಟಿಸಿವೆ.</p>.<p>ನಾವು ಇಂದು ಚುನಾವಣಾ ಆಯೋಗವನ್ನು ಸಂಪರ್ಕಿಸಿದ್ದು, ಈ ದುರುದ್ದೇಶ ಪೂರಿತ ಪ್ರಚಾರವನ್ನು ತಡೆಯುವಂತೆ ಮನವಿ ಮಾಡಿದ್ದೇವೆ’ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್. ಸಂಪತ್ ಮತ್ತು ಇತರ ಅಧಿಕಾರಿಗಳನ್ನು ಭೇಟಿಯಾದ ಬಳಿಕ ಜಿಂದಾಲ್ ಸುದ್ದಿಗಾರರಿಗೆ ತಿಳಿಸಿದರು.<br /> <br /> ತಮ್ಮ ಪರವಾಗಿ ಸುದ್ದಿ ಪ್ರಸಾರ ಮಾಡಲು ಈ ವಾಹಿನಿಗಳು ₨100 ಕೋಟಿಗಳನ್ನು ನೀಡುವಂತೆ ಬೇಡಿಕೆ ಇಟ್ಟಿದ್ದನ್ನು ತಾವು ಬಯಲಿಗೆಳೆದ ಬಳಿಕ, ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿವೆ ಎಂದು ಹರಿಯಾಣದ ಕುರುಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ನವೀನ್ ಜಿಂದಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>