<p><strong>ಪುದುಚೇರಿ (ಪಿಟಿಐ): </strong>ತಮಿಳುನಾಡಿನಲ್ಲಿ ಬಿಜೆಪಿ ಒಳಗೊಂಡಂತೆ ಏಳು ಪಕ್ಷಗಳ ಮೈತ್ರಿಕೂಟ ಅಸ್ತಿತ್ವಕ್ಕೆ ಬಂದು ಕೇವಲ ಒಂದೇ ದಿನ ಕಳೆಯುವಷ್ಟರಲ್ಲಿ ಬಿರುಕು ಕಾಣಿಸಿಕೊಂಡಿದೆ.<br /> <br /> ಕೇಂದ್ರಾಡಳಿತ ಪ್ರದೇಶ ಪುದುಚೇರಿ ಲೋಕಸಭೆ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಪಿಎಂಕೆ ಶುಕ್ರವಾರ ಘೋಷಿಸಿದೆ. ಆದರೆ, ಇಲ್ಲಿಂದ ಈಗಾಗಲೇ ಎಐಎನ್ಆರ್ಸಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಈ ಎರಡೂ ಪಕ್ಷಗಳು ಏಳು ಪಕ್ಷಗಳ ಮೈತ್ರಿಕೂಟದ ಭಾಗವಾಗಿವೆ. ಪಿಎಂಕೆಯ ಈ ನಡೆಯಿಂದ ಮೈತ್ರಿಕೂಟ ಮುಜುಗರಕ್ಕೊಳಗಾಗುವಂತಾಗಿದೆ.<br /> <br /> ಪಿಎಂಕೆ ಪುದುಚೇರಿ ಘಟಕದ ಸಂಘಟಕ ಮತ್ತು ಮಾಜಿ ಶಾಸಕ ಆರ್.ಕೆ.ಆರ್. ಆನಂದ್ರಾಮನ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ‘ಅನಗತ್ಯ ಗೊಂದಲ ಮತ್ತು ಮುಜುಗರಕ್ಕೆ ಎಡೆಮಾಡಿಕೊಡುವುದು ಬೇಡ’ ಎಂದು ಪುದುಚೇರಿ ಬಿಜೆಪಿ ಘಟಕದ ಅಧ್ಯಕ್ಷ ಎಂ. ವಿಶ್ವೇಶ್ವರನ್ ಹೇಳಿದ್ದಾರೆ.<br /> <br /> ಈ ಕುರಿತು ಆನಂದ್ರಾಮನ್ ಅವರೊಂದಿಗೆ ಚರ್ಚಿಸಿ ಅವರ ಮನವೊಲಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಗುರುವಾರ ಚೆನ್ನೈನಲ್ಲಿ ಏಳು ಪಕ್ಷಗಳ ಮೈತ್ರಿಕೂಟವನ್ನು ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುದುಚೇರಿ (ಪಿಟಿಐ): </strong>ತಮಿಳುನಾಡಿನಲ್ಲಿ ಬಿಜೆಪಿ ಒಳಗೊಂಡಂತೆ ಏಳು ಪಕ್ಷಗಳ ಮೈತ್ರಿಕೂಟ ಅಸ್ತಿತ್ವಕ್ಕೆ ಬಂದು ಕೇವಲ ಒಂದೇ ದಿನ ಕಳೆಯುವಷ್ಟರಲ್ಲಿ ಬಿರುಕು ಕಾಣಿಸಿಕೊಂಡಿದೆ.<br /> <br /> ಕೇಂದ್ರಾಡಳಿತ ಪ್ರದೇಶ ಪುದುಚೇರಿ ಲೋಕಸಭೆ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಪಿಎಂಕೆ ಶುಕ್ರವಾರ ಘೋಷಿಸಿದೆ. ಆದರೆ, ಇಲ್ಲಿಂದ ಈಗಾಗಲೇ ಎಐಎನ್ಆರ್ಸಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಈ ಎರಡೂ ಪಕ್ಷಗಳು ಏಳು ಪಕ್ಷಗಳ ಮೈತ್ರಿಕೂಟದ ಭಾಗವಾಗಿವೆ. ಪಿಎಂಕೆಯ ಈ ನಡೆಯಿಂದ ಮೈತ್ರಿಕೂಟ ಮುಜುಗರಕ್ಕೊಳಗಾಗುವಂತಾಗಿದೆ.<br /> <br /> ಪಿಎಂಕೆ ಪುದುಚೇರಿ ಘಟಕದ ಸಂಘಟಕ ಮತ್ತು ಮಾಜಿ ಶಾಸಕ ಆರ್.ಕೆ.ಆರ್. ಆನಂದ್ರಾಮನ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ‘ಅನಗತ್ಯ ಗೊಂದಲ ಮತ್ತು ಮುಜುಗರಕ್ಕೆ ಎಡೆಮಾಡಿಕೊಡುವುದು ಬೇಡ’ ಎಂದು ಪುದುಚೇರಿ ಬಿಜೆಪಿ ಘಟಕದ ಅಧ್ಯಕ್ಷ ಎಂ. ವಿಶ್ವೇಶ್ವರನ್ ಹೇಳಿದ್ದಾರೆ.<br /> <br /> ಈ ಕುರಿತು ಆನಂದ್ರಾಮನ್ ಅವರೊಂದಿಗೆ ಚರ್ಚಿಸಿ ಅವರ ಮನವೊಲಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಗುರುವಾರ ಚೆನ್ನೈನಲ್ಲಿ ಏಳು ಪಕ್ಷಗಳ ಮೈತ್ರಿಕೂಟವನ್ನು ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>