ನಕ್ಸಲ್ರು ಜಾರ್ಖಂಡ್ನಲ್ಲಿ ಮತದಾನ ಆರಂಭಕ್ಕೂ ಮುನ್ನ ಸರಣಿ ನೆಲಬಾಂಬ್ ಸ್ಫೋಟಿಸಿ, ಭದ್ರತಾ ಸಿಬ್ಬಂದಿಗಳ ಜತೆ ಗುಂಡಿನ ಚಕಮಕಿ ನಡೆಸಿದ ಘಟನೆ ವರದಿಯಾಗಿದ್ದು, ಪಟ್ನಾದ ಮುಂಗರ್ ಜಿಲ್ಲೆಯಲ್ಲಿ ನಕ್ಸಲ್ರು ಹುದುಗಿಸಿಟ್ಟಿದ್ದ ನೆಲಬಾಂಬ್ಗೆ ಚುನಾವಣಾ ಭದ್ರತೆಯಲ್ಲಿ ತೊಡಗಿದ್ದ ಇಬ್ಬರು ಕೇಂದ್ರಿಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರು ಮೃತಪಟ್ಟಿದ್ದಾರೆ. ಸಿಆರ್ಪಿಎಫ್ ಯೋಧರು ಬಲಿಯಾದ ಹಿನ್ನೆಲೆಯಲ್ಲಿ ಜಮುಯಿ ಜಿಲ್ಲಾಡಳಿತವು 12 ಮತಗಟ್ಟೆಗಳಲ್ಲಿನ ಮತದಾನವನ್ನು ರದ್ದುಗೊಳಿಸಿತು.