<p><strong>ನವದೆಹಲಿ (ಐಎಎನ್ಎಸ್): </strong>ಜಾತಿ ವಿಷಯವಾಗಿ ನರೇಂದ್ರ ಮೋದಿ ಅವರ ಮೇಲೆ ಶುಕ್ರವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ‘ಮೋದಿಯವರ ಇನ್ನೊಂದು ಹುಸಿ ಮುಖವಾಡ ಕಳಚಿಬಿದ್ದಿದೆ’ ಎಂದು ಲೇವಡಿ ಮಾಡಿದೆ.<br /> <br /> ‘ತಾವು ಹಿಂದುಳಿದ ವರ್ಗಕ್ಕೆ ಸೇರಿದವರೆಂದು ಹೇಳುವ ಮೂಲಕ ಮೋದಿ ಇನ್ನೊಂದು ಸುಳ್ಳು ಹೇಳಿದ್ದಾರೆ. ಈ ರೀತಿ ಸುಳ್ಳಿನ ಕಂತೆ ಹೆಣೆಯುವ ಮೂಲಕ ಅವರು ಪ್ರತಿಯೊಬ್ಬರನ್ನೂ ಮೂರ್ಖರನ್ನಾಗಿಸಲು ಹುನ್ನಾರ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಕೀಲ್ ಅಹ್ಮದ್ ಟ್ವೀಟ್ ಮಾಡಿದ್ದಾರೆ.<br /> <br /> ‘ಮೋದಿ ಮೇಲ್ವರ್ಗಕ್ಕೆ ಸೇರಿದ್ದಾರೆ . ಆದರೆ ಮತದಾರರ ಅನುಕಂಪ ಗಿಟ್ಟಿಸುವ ಸಲುವಾಗಿ ತಾವು ಹಿಂದುಳಿದ ವರ್ಗಕ್ಕೆ ಸೇರಿದವರೆಂದು ಹೇಳಿಕೊಂಡಿದ್ದಾರೆ’ ಎಂದು ಗುಜರಾತ್್ ಕಾಂಗ್ರೆಸ್್ ಗುರುವಾರ ಹೇಳಿಕೆ ಹೊರಡಿಸಿತ್ತು.<br /> <br /> ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್್ ಜೇಟ್ಲಿ, ‘ ಸಾಮಾನ್ಯನೊಬ್ಬನ ಕೈಯಿಂದ ಸೋಲುವುದನ್ನು ಅರಗಿಸಿಕೊಳ್ಳುವುದಕ್ಕೆ ಕಾಂಗ್ರೆಸ್ಗೆ ಕಷ್ಟವಾಗುತ್ತಿದೆ. ಆದ್ದರಿಂದ ಇದನ್ನು ವಿವಾದ ಮಾಡುತ್ತಿದೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ಜಾತಿ ವಿಷಯವಾಗಿ ನರೇಂದ್ರ ಮೋದಿ ಅವರ ಮೇಲೆ ಶುಕ್ರವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ‘ಮೋದಿಯವರ ಇನ್ನೊಂದು ಹುಸಿ ಮುಖವಾಡ ಕಳಚಿಬಿದ್ದಿದೆ’ ಎಂದು ಲೇವಡಿ ಮಾಡಿದೆ.<br /> <br /> ‘ತಾವು ಹಿಂದುಳಿದ ವರ್ಗಕ್ಕೆ ಸೇರಿದವರೆಂದು ಹೇಳುವ ಮೂಲಕ ಮೋದಿ ಇನ್ನೊಂದು ಸುಳ್ಳು ಹೇಳಿದ್ದಾರೆ. ಈ ರೀತಿ ಸುಳ್ಳಿನ ಕಂತೆ ಹೆಣೆಯುವ ಮೂಲಕ ಅವರು ಪ್ರತಿಯೊಬ್ಬರನ್ನೂ ಮೂರ್ಖರನ್ನಾಗಿಸಲು ಹುನ್ನಾರ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಕೀಲ್ ಅಹ್ಮದ್ ಟ್ವೀಟ್ ಮಾಡಿದ್ದಾರೆ.<br /> <br /> ‘ಮೋದಿ ಮೇಲ್ವರ್ಗಕ್ಕೆ ಸೇರಿದ್ದಾರೆ . ಆದರೆ ಮತದಾರರ ಅನುಕಂಪ ಗಿಟ್ಟಿಸುವ ಸಲುವಾಗಿ ತಾವು ಹಿಂದುಳಿದ ವರ್ಗಕ್ಕೆ ಸೇರಿದವರೆಂದು ಹೇಳಿಕೊಂಡಿದ್ದಾರೆ’ ಎಂದು ಗುಜರಾತ್್ ಕಾಂಗ್ರೆಸ್್ ಗುರುವಾರ ಹೇಳಿಕೆ ಹೊರಡಿಸಿತ್ತು.<br /> <br /> ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್್ ಜೇಟ್ಲಿ, ‘ ಸಾಮಾನ್ಯನೊಬ್ಬನ ಕೈಯಿಂದ ಸೋಲುವುದನ್ನು ಅರಗಿಸಿಕೊಳ್ಳುವುದಕ್ಕೆ ಕಾಂಗ್ರೆಸ್ಗೆ ಕಷ್ಟವಾಗುತ್ತಿದೆ. ಆದ್ದರಿಂದ ಇದನ್ನು ವಿವಾದ ಮಾಡುತ್ತಿದೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>