<p><strong>ಬಾರ್ಮೇರ್ (ಪಿಟಿಐ): </strong>ಬಿಜೆಪಿ ಮತ್ತು ನರೇಂದ್ರ ಮೋದಿ ವಿರುದ್ಧದ ವಾಗ್ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿರುವ ಬಂಡಾಯ ಎದ್ದಿರುವ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ‘ವ್ಯಕ್ತಿಯ ವೈಭವೀಕರಣ’ ಪ್ರಜಾಪ್ರಭುತ್ವ ಮತ್ತು ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.<br /> <br /> ಬಾರ್ಮೇರ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿ ಒಂದು ದಿನದ ನಂತರ ಮಾತನಾಡಿದ ಅವರು ‘ಒಬ್ಬ ವ್ಯಕ್ತಿಯನ್ನು ಕೇಂದ್ರವಾಗಿರಿಸಿಕೊಂಡು ಎಲ್ಲವನ್ನೂ ನಡೆಸುವುದು ಸರಿಯಲ್ಲ. ಅದು ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.<br /> <br /> ‘ಬಹುಶಃ ಯಾವುದೋ ಯೋಜನೆ ಅನ್ವಯ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ನನ್ನನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡುತ್ತಿದ್ದಾರೆ. ನನ್ನನ್ನು ವಂಚಿಸಲಾಗಿದೆ ಮತ್ತು ಅವಮಾನಿಸಲಾಗಿದೆ. ನನಗೆ ನಿರಾಶೆಯಾಗಿದೆ. ಆದರೆ ನಾನು ಪಕ್ಷ ತೊರೆಯುವುದಿಲ್ಲ. ಅವರು ಬೇಕಿದ್ದರೆ ಉಚ್ಚಾಟಿಸಲಿ’ ಎಂದು ಜಸ್ವಂತ್ ಹೇಳಿದ್ದಾರೆ.<br /> <br /> ಕಾಂಗ್ರೆಸ್ನಿಂದ ಒಂದು ವಾರದ ಹಿಂದೆ ಬಿಜೆಪಿ ಸೇರಿರುವ ಸೋನಾರಾಂ ಚೌಧರಿ ಅವರಿಗೆ ಬಾರ್ಮೇರ್ ಲೋಕಸಭಾ ಕ್ಷೇತದ ಟಿಕೆಟ್ ನೀಡಿರುವ ಪಕ್ಷದ ನಿರ್ಧಾರ ವಿರೋಧಿಸಿ ಜಸ್ವಂತ್ ಬಂಡಾಯ ಎದ್ದಿದ್ದಾರೆ.<br /> <br /> <strong>ರಾಜೆ ತಿರುಗೇಟು: </strong>ಪಕ್ಷ ಮತ್ತು ಅದರ ಅಧ್ಯಕ್ಷ ರಾಜನಾಥ್ ಸಿಂಗ್ ತೆಗೆದುಕೊಳ್ಳುವ ನಿರ್ಧಾರಗಳನ್ನು ಒಪ್ಪಿಕೊಳ್ಳುವ ಹವ್ಯಾಸವನ್ನು ನಾಯಕರು ಬೆಳೆಸಿಕೊಳ್ಳಬೇಕು ಎಂದು ಹೇಳುವ ಮೂಲಕ ಜಸ್ವಂತ್ ಅವರಿಗೆ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ತಿರುಗೇಟು ನೀಡಿದರು.<br /> <br /> ಬಾರ್ಮೇರ್ ಬಿಜೆಪಿ ಅಭ್ಯರ್ಥಿ ಪರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ‘ಪ್ರತಿಯೊಬ್ಬರೂ ಪಕ್ಷದ ನಿರ್ಧಾರವನ್ನು ಸ್ವೀಕರಿಸಬೇಕು ಮತ್ತು ಪಕ್ಷ ಬಿಡಬಾರದು’ ಎಂದು ಜಸ್ವಂತ್ ಹೆಸರು ಪ್ರಸ್ತಾಪಿಸದೆ ವಸುಂಧರಾ ರಾಜೆ ಹೇಳಿದರು.<br /> <br /> <strong>ಸೋನಾರಾಂ ನಾಮಪತ್ರ</strong><br /> ಈ ಮಧ್ಯೆ, ಬಾರ್ಮೇರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋನಾರಾಂ ಅವರು ಮಂಗಳವಾರ ಇಲ್ಲಿ ನಾಮಪತ್ರ ಸಲ್ಲಿಸಿದರು.<br /> ಜಿಲ್ಲಾಧಿಕಾರಿ ಭಾನು ಪ್ರಕಾಶ್ ಅವರಿಗೆ ಎರಡು ಸೆಟ್ ನಾಮಪತ್ರಗಳನ್ನು ನೀಡಿದರು.<br /> <br /> ರಾಜಸ್ತಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಬೆಂಬಲದಿಂದಾಗಿ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಬದಲಾಗಿ ಸೋನಾರಾಂ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.<br /> <br /> ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ತಿರುಗಿ ಬಿದ್ದಿದ್ದ ಕಾಂಗ್ರೆಸ್ನ ಮಾಜಿ ಶಾಸಕ ಸೋನಾರಾಂ ಅವರು ತಮ್ಮ ಬೆಂಬಲಿಗರೊಂದಿಗೆ ಕಳೆದ ವಾರ ಬಿಜೆಪಿ ಸೇರಿದ್ದರು.<br /> <br /> <strong>ಸುಷ್ಮಾ–ರಾಜನಾಥ್ ಭಿನ್ನ ಹೇಳಿಕೆ<br /> ನವದೆಹಲಿ (ಪಿಟಿಐ):</strong> ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರ ಹೇಳಿಕೆಗೆ ವ್ಯತಿರಿಕ್ತವಾಗಿ ಮಾತನಾಡಿರುವ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಿಸುವ ನಿರ್ಧಾರವನ್ನು ಕೇಂದ್ರ ಚುನಾವಣಾ ಸಮಿತಿಯಲ್ಲಿ ಚರ್ಚಿಸಿ ಕೈಗೊಳ್ಳಲಾಗಿದೆ. ಕೆಲವು ರಾಜಕೀಯ ಅನಿವಾರ್ಯತೆಗಳಿಂದ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಹೇಳಿದ್ದಾರೆ.</p>.<p>ಜಸ್ವಂತ್ ಅವರಿಗೆ ಟಿಕೆಟ್ ನಿರಾಕರಿಸುವ ನಿರ್ಧಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿಯದ್ದಲ್ಲ ಎಂದು ಟಿಕೆಟ್ ನಿರಾಕರಣೆಯಾದ ನಂತರ ಸುಷ್ಮಾ ಸ್ವರಾಜ್ ಹೇಳಿದ್ದರು.<br /> <br /> ಜಸ್ವಂತ್ ಅವರಿಗೆ ಟಿಕೆಟ್ ನೀಡಬೇಕೆಂಬುದೇ ಪ್ರತಿಯೊಬ್ಬರ ಆಕಾಂಕ್ಷೆಯಾಗಿದ್ದರೂ ಟಿಕೆಟ್ ನೀಡುವುದು ಸಾಧ್ಯವಾಗಲಿಲ್ಲ. ಇದರಿಂದ ತಾವು ಸೇರಿದಂತೆ ಪಕ್ಷದ ನಾಯಕರಿಗೆ ನೋವಾಗಿದೆ ಎಂದು ರಾಜನಾಥ್ ತಿಳಿಸಿದ್ದಾರೆ. ‘ಅಸಾಧಾರಣ ಸಂದರ್ಭಗಳಲ್ಲಿ ಅಸಾಧಾರಣ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾರ್ಮೇರ್ (ಪಿಟಿಐ): </strong>ಬಿಜೆಪಿ ಮತ್ತು ನರೇಂದ್ರ ಮೋದಿ ವಿರುದ್ಧದ ವಾಗ್ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿರುವ ಬಂಡಾಯ ಎದ್ದಿರುವ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ‘ವ್ಯಕ್ತಿಯ ವೈಭವೀಕರಣ’ ಪ್ರಜಾಪ್ರಭುತ್ವ ಮತ್ತು ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.<br /> <br /> ಬಾರ್ಮೇರ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿ ಒಂದು ದಿನದ ನಂತರ ಮಾತನಾಡಿದ ಅವರು ‘ಒಬ್ಬ ವ್ಯಕ್ತಿಯನ್ನು ಕೇಂದ್ರವಾಗಿರಿಸಿಕೊಂಡು ಎಲ್ಲವನ್ನೂ ನಡೆಸುವುದು ಸರಿಯಲ್ಲ. ಅದು ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.<br /> <br /> ‘ಬಹುಶಃ ಯಾವುದೋ ಯೋಜನೆ ಅನ್ವಯ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ನನ್ನನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡುತ್ತಿದ್ದಾರೆ. ನನ್ನನ್ನು ವಂಚಿಸಲಾಗಿದೆ ಮತ್ತು ಅವಮಾನಿಸಲಾಗಿದೆ. ನನಗೆ ನಿರಾಶೆಯಾಗಿದೆ. ಆದರೆ ನಾನು ಪಕ್ಷ ತೊರೆಯುವುದಿಲ್ಲ. ಅವರು ಬೇಕಿದ್ದರೆ ಉಚ್ಚಾಟಿಸಲಿ’ ಎಂದು ಜಸ್ವಂತ್ ಹೇಳಿದ್ದಾರೆ.<br /> <br /> ಕಾಂಗ್ರೆಸ್ನಿಂದ ಒಂದು ವಾರದ ಹಿಂದೆ ಬಿಜೆಪಿ ಸೇರಿರುವ ಸೋನಾರಾಂ ಚೌಧರಿ ಅವರಿಗೆ ಬಾರ್ಮೇರ್ ಲೋಕಸಭಾ ಕ್ಷೇತದ ಟಿಕೆಟ್ ನೀಡಿರುವ ಪಕ್ಷದ ನಿರ್ಧಾರ ವಿರೋಧಿಸಿ ಜಸ್ವಂತ್ ಬಂಡಾಯ ಎದ್ದಿದ್ದಾರೆ.<br /> <br /> <strong>ರಾಜೆ ತಿರುಗೇಟು: </strong>ಪಕ್ಷ ಮತ್ತು ಅದರ ಅಧ್ಯಕ್ಷ ರಾಜನಾಥ್ ಸಿಂಗ್ ತೆಗೆದುಕೊಳ್ಳುವ ನಿರ್ಧಾರಗಳನ್ನು ಒಪ್ಪಿಕೊಳ್ಳುವ ಹವ್ಯಾಸವನ್ನು ನಾಯಕರು ಬೆಳೆಸಿಕೊಳ್ಳಬೇಕು ಎಂದು ಹೇಳುವ ಮೂಲಕ ಜಸ್ವಂತ್ ಅವರಿಗೆ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ತಿರುಗೇಟು ನೀಡಿದರು.<br /> <br /> ಬಾರ್ಮೇರ್ ಬಿಜೆಪಿ ಅಭ್ಯರ್ಥಿ ಪರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ‘ಪ್ರತಿಯೊಬ್ಬರೂ ಪಕ್ಷದ ನಿರ್ಧಾರವನ್ನು ಸ್ವೀಕರಿಸಬೇಕು ಮತ್ತು ಪಕ್ಷ ಬಿಡಬಾರದು’ ಎಂದು ಜಸ್ವಂತ್ ಹೆಸರು ಪ್ರಸ್ತಾಪಿಸದೆ ವಸುಂಧರಾ ರಾಜೆ ಹೇಳಿದರು.<br /> <br /> <strong>ಸೋನಾರಾಂ ನಾಮಪತ್ರ</strong><br /> ಈ ಮಧ್ಯೆ, ಬಾರ್ಮೇರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋನಾರಾಂ ಅವರು ಮಂಗಳವಾರ ಇಲ್ಲಿ ನಾಮಪತ್ರ ಸಲ್ಲಿಸಿದರು.<br /> ಜಿಲ್ಲಾಧಿಕಾರಿ ಭಾನು ಪ್ರಕಾಶ್ ಅವರಿಗೆ ಎರಡು ಸೆಟ್ ನಾಮಪತ್ರಗಳನ್ನು ನೀಡಿದರು.<br /> <br /> ರಾಜಸ್ತಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಬೆಂಬಲದಿಂದಾಗಿ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಬದಲಾಗಿ ಸೋನಾರಾಂ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.<br /> <br /> ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ತಿರುಗಿ ಬಿದ್ದಿದ್ದ ಕಾಂಗ್ರೆಸ್ನ ಮಾಜಿ ಶಾಸಕ ಸೋನಾರಾಂ ಅವರು ತಮ್ಮ ಬೆಂಬಲಿಗರೊಂದಿಗೆ ಕಳೆದ ವಾರ ಬಿಜೆಪಿ ಸೇರಿದ್ದರು.<br /> <br /> <strong>ಸುಷ್ಮಾ–ರಾಜನಾಥ್ ಭಿನ್ನ ಹೇಳಿಕೆ<br /> ನವದೆಹಲಿ (ಪಿಟಿಐ):</strong> ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರ ಹೇಳಿಕೆಗೆ ವ್ಯತಿರಿಕ್ತವಾಗಿ ಮಾತನಾಡಿರುವ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಿಸುವ ನಿರ್ಧಾರವನ್ನು ಕೇಂದ್ರ ಚುನಾವಣಾ ಸಮಿತಿಯಲ್ಲಿ ಚರ್ಚಿಸಿ ಕೈಗೊಳ್ಳಲಾಗಿದೆ. ಕೆಲವು ರಾಜಕೀಯ ಅನಿವಾರ್ಯತೆಗಳಿಂದ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಹೇಳಿದ್ದಾರೆ.</p>.<p>ಜಸ್ವಂತ್ ಅವರಿಗೆ ಟಿಕೆಟ್ ನಿರಾಕರಿಸುವ ನಿರ್ಧಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿಯದ್ದಲ್ಲ ಎಂದು ಟಿಕೆಟ್ ನಿರಾಕರಣೆಯಾದ ನಂತರ ಸುಷ್ಮಾ ಸ್ವರಾಜ್ ಹೇಳಿದ್ದರು.<br /> <br /> ಜಸ್ವಂತ್ ಅವರಿಗೆ ಟಿಕೆಟ್ ನೀಡಬೇಕೆಂಬುದೇ ಪ್ರತಿಯೊಬ್ಬರ ಆಕಾಂಕ್ಷೆಯಾಗಿದ್ದರೂ ಟಿಕೆಟ್ ನೀಡುವುದು ಸಾಧ್ಯವಾಗಲಿಲ್ಲ. ಇದರಿಂದ ತಾವು ಸೇರಿದಂತೆ ಪಕ್ಷದ ನಾಯಕರಿಗೆ ನೋವಾಗಿದೆ ಎಂದು ರಾಜನಾಥ್ ತಿಳಿಸಿದ್ದಾರೆ. ‘ಅಸಾಧಾರಣ ಸಂದರ್ಭಗಳಲ್ಲಿ ಅಸಾಧಾರಣ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>