<p><strong>ನವದೆಹಲಿ (ಪಿಟಿಐ): </strong>ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ನಡೆಸುತ್ತಿರುವ ಚುನಾವಣಾ ಪ್ರಚಾರ ಅತಿ ಆತ್ಮವಿಶ್ವಾಸದಿಂದ ಕೂಡಿದ್ದು 2004ರ ‘ಭಾರತ ಪ್ರಕಾಶಿಸುತ್ತಿದೆ’ ಮಾದರಿಯಲ್ಲಿಯೇ ಸಾಗುತ್ತಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.<br /> <br /> ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಿದರೂ ಬಿಜೆಪಿ ಬಹುಮತದ ಹತ್ತಿರಕ್ಕೂ ಬರುವುದು ಸಾಧ್ಯವಿದೆ ಎಂದು ಅನಿಸುವುದಿಲ್ಲ ಎಂದು ಕಾಂಗ್ರೆಸ್ ನೇತೃತ್ವದ ಯುಪಿಎಯ ಪ್ರಮುಖ ನಾಯಕರಾಗಿರುವ ಪವಾರ್ ಅಭಿಪ್ರಾಯಪಟ್ಟಿದ್ದಾರೆ.<br /> <br /> ಮೋದಿ ನೇತೃತ್ವದಲ್ಲಿ ಬಿಜೆಪಿಯು ಜನರನ್ನು ತಲುಪಲು ಕಠಿಣ ಪ್ರಯತ್ನ ನಡೆಸುತ್ತಿರುವಾಗ ಕಾಂಗ್ರೆಸ್ ಕೂಡ ಹೆಚ್ಚು ಕ್ರಿಯಾಶೀಲವಾಗಬೇಕು ಎಂದು ಪವಾರ್ ಹೇಳಿದ್ದಾರೆ.<br /> <br /> ಮೋದಿ ಅಲೆ ಇದೆ ಎಂಬುದನ್ನು ನಿರಾಕರಿಸಿದ ಶರದ್ ಪವಾರ್, ‘ಏಕ ವ್ಯಕ್ತಿ ಕೇಂದ್ರಿತ ಪ್ರಚಾರ ಪ್ರಮುಖ ಪ್ರತಿಪಕ್ಷವಾದ ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಅನುಕೂಲಕರ ಪರಿಸ್ಥಿತಿ ಸೃಷ್ಟಿಸಿದೆ. ಆದರೆ ಅತಿ ಆತ್ಮವಿಶ್ವಾಸ ಅದನ್ನು ಹಾಳುಗೆಡವಲಿದೆ’ ಎಂದಿದ್ದಾರೆ.<br /> <br /> ಅಟಲ್ ಬಿಹಾರಿ ವಾಜಪೇಯಿ ಅವರಂತಹ ದೊಡ್ಡ ನಾಯಕರಿದ್ದಾಗಲೂ 2004ರಲ್ಲಿ ಬಿಜೆಪಿ ಚುನಾವಣೆಯಲ್ಲಿ ಸೋತಿತ್ತು. ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಮಾತಿನಲ್ಲಿಯೇ ಅವರು ಮುಳುಗಿ ಹೋದರು. ಮನಮೋಹನ್ ಸಿಂಗ್ ಅವರು ಹೇಗೆ ಪ್ರಧಾನಿಯಾದರು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಂಡಿಲ್ಲ ಎಂದು ಪವಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ನಡೆಸುತ್ತಿರುವ ಚುನಾವಣಾ ಪ್ರಚಾರ ಅತಿ ಆತ್ಮವಿಶ್ವಾಸದಿಂದ ಕೂಡಿದ್ದು 2004ರ ‘ಭಾರತ ಪ್ರಕಾಶಿಸುತ್ತಿದೆ’ ಮಾದರಿಯಲ್ಲಿಯೇ ಸಾಗುತ್ತಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.<br /> <br /> ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಿದರೂ ಬಿಜೆಪಿ ಬಹುಮತದ ಹತ್ತಿರಕ್ಕೂ ಬರುವುದು ಸಾಧ್ಯವಿದೆ ಎಂದು ಅನಿಸುವುದಿಲ್ಲ ಎಂದು ಕಾಂಗ್ರೆಸ್ ನೇತೃತ್ವದ ಯುಪಿಎಯ ಪ್ರಮುಖ ನಾಯಕರಾಗಿರುವ ಪವಾರ್ ಅಭಿಪ್ರಾಯಪಟ್ಟಿದ್ದಾರೆ.<br /> <br /> ಮೋದಿ ನೇತೃತ್ವದಲ್ಲಿ ಬಿಜೆಪಿಯು ಜನರನ್ನು ತಲುಪಲು ಕಠಿಣ ಪ್ರಯತ್ನ ನಡೆಸುತ್ತಿರುವಾಗ ಕಾಂಗ್ರೆಸ್ ಕೂಡ ಹೆಚ್ಚು ಕ್ರಿಯಾಶೀಲವಾಗಬೇಕು ಎಂದು ಪವಾರ್ ಹೇಳಿದ್ದಾರೆ.<br /> <br /> ಮೋದಿ ಅಲೆ ಇದೆ ಎಂಬುದನ್ನು ನಿರಾಕರಿಸಿದ ಶರದ್ ಪವಾರ್, ‘ಏಕ ವ್ಯಕ್ತಿ ಕೇಂದ್ರಿತ ಪ್ರಚಾರ ಪ್ರಮುಖ ಪ್ರತಿಪಕ್ಷವಾದ ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಅನುಕೂಲಕರ ಪರಿಸ್ಥಿತಿ ಸೃಷ್ಟಿಸಿದೆ. ಆದರೆ ಅತಿ ಆತ್ಮವಿಶ್ವಾಸ ಅದನ್ನು ಹಾಳುಗೆಡವಲಿದೆ’ ಎಂದಿದ್ದಾರೆ.<br /> <br /> ಅಟಲ್ ಬಿಹಾರಿ ವಾಜಪೇಯಿ ಅವರಂತಹ ದೊಡ್ಡ ನಾಯಕರಿದ್ದಾಗಲೂ 2004ರಲ್ಲಿ ಬಿಜೆಪಿ ಚುನಾವಣೆಯಲ್ಲಿ ಸೋತಿತ್ತು. ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಮಾತಿನಲ್ಲಿಯೇ ಅವರು ಮುಳುಗಿ ಹೋದರು. ಮನಮೋಹನ್ ಸಿಂಗ್ ಅವರು ಹೇಗೆ ಪ್ರಧಾನಿಯಾದರು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಂಡಿಲ್ಲ ಎಂದು ಪವಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>