ಪ್ರಜ್ವಲ್ ಗೆಲುವಿನಿಂದ ಪಕ್ಷದ ಪಾಲಿಗೆ ಸಂಘಟನಾ ಚತುರ, ಸಮರ್ಥ ಯುವ ನಾಯಕ ದೊರಕಿದಂತಾಗಿದೆ. ಭವಿಷ್ಯದಲ್ಲಿ ಪಕ್ಷದಲ್ಲಿ ಉನ್ನತ ಹುದ್ದೆ ದೊರೆಯುವ ಸಾಧ್ಯತೆಯೂ ಹೆಚ್ಚಾಗಿದೆ.
ತಮ್ಮ ಪ್ರಚಾರದ ವೇಳೆ ಎಚ್.ಡಿ.ದೇವೇಗೌಡ ಹಾಗೂ ಸಚಿವ ಎಚ್.ಡಿ.ರೇವಣ್ಣ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತ್ರವೇ ಪ್ರಸ್ತಾಪಿಸಿ ಮತಯಾಚಿಸಿ, ಮತದಾರರ ಒಲವು ಗಿಟ್ಟಿಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿದ್ದಾರೆ. ಇನ್ನೂ ಯುವಕರಾಗಿರುವ ಕಾರಣ ಕ್ರಿಯಾಶೀಲರಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಸಾಕಷ್ಟು ಸಮಯವೂ ಇದೆ.