ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಭವಿಷ್ಯಕ್ಕೆ ಮಹತ್ವದ ಚುನಾವಣೆ: ದತ್ತಾತ್ರೇಯ ಹೊಸಬಾಳೆ

Published 26 ಏಪ್ರಿಲ್ 2024, 14:36 IST
Last Updated 26 ಏಪ್ರಿಲ್ 2024, 14:36 IST
ಅಕ್ಷರ ಗಾತ್ರ

ಬೆಂಗಳೂರು: ‘ದೇಶದ ಭವಿಷ್ಯದ ದೃಷ್ಟಿಯಿಂದ ಈ ಬಾರಿಯ ಲೋಕಸಭಾ ಚುನಾವಣೆ ಹಿಂದೆಂದಿಗಿಂತಲೂ ಹೆಚ್ಚು ಮಹತ್ವದ್ದು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅಭಿಪ್ರಾಯಪಟ್ಟರು.

ಶೇಷಾದ್ರಿಪುರ ಮತಗಟ್ಟೆಯಲ್ಲಿ ಶುಕ್ರವಾರ ಮತದಾನ ಮಾಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ದೇಶದ ಅಭಿವೃದ್ಧಿಗೆ, ವಿಶ್ವದಲ್ಲಿ ಭಾರತದ ಗೌರವಕ್ಕೆ, ಈ ದೇಶದ ಕೋಟ್ಯಂತರ ಜನರ ಜೀವನ ಹಸನಾಗಲು, ಸುಖ– ಸಮೃದ್ಧಿ ಹೊಂದಲು ಈ ಚುನಾವಣೆಯ ಫಲಿತಾಂಶ ಮಹತ್ತರವಾದ ಭೂಮಿಕೆ ವಹಿಸಲಿದೆ’ ಎಂದು ಅವರು ಹೇಳಿದರು.

‘ನಮ್ಮ ದೇಶದಲ್ಲಿ ಸಂವಿಧಾನಕ್ಕೆ ಅನುಗುಣವಾಗಿಯೇ ಎಲ್ಲ ಹಂತಗಳಲ್ಲೂ ಚುನಾವಣೆಗಳು ನಡೆಯುತ್ತವೆ. ಸಮಾಜದ ಎಲ್ಲರೂ ಅಂದರೆ ನೂರಕ್ಕೆ ನೂರರಷ್ಟು ಜನ ಮತದಾನ ಮಾಡಬೇಕೆಂದು ಸಂಘದ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಪ್ರಜಾತಂತ್ರವನ್ನು ಗೆಲ್ಲಿಸಿ; ಭಾರತವನ್ನು ಉಳಿಸಿ ಭಾರತವನ್ನು ಸಮೃದ್ಧಪಡಿಸಿ ಎಂಬ ಉದ್ದೇಶದಿಂದ ಅಭಿಯಾನ ನಡೆಸಲಾಗುತ್ತಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT