‘ಕಳೆದ 30 ವರ್ಷಗಳಿಂದ ಬಿಜೆಪಿ ಸಂಘಟನೆ ಮಾಡಿ ಗೆಲ್ಲಿಸಲು ಪ್ರಯತ್ನ ಮಾಡಿದ್ದೆ. ಆದರೆ, ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿರಲಿಲ್ಲ. 2018ರಲ್ಲಿ ಜನ ನನ್ನನ್ನು ಗೆಲ್ಲಿಸಿದರು. ಅದಕ್ಕೂ ಮುನ್ನ ಎರಡು ಬಾರಿ ನನಗೆ ಟಿಕೆಟ್ ತಪ್ಪಿತ್ತು. ಆಗಲೂ ನಾನು ಪಕ್ಷ ಬಿಟ್ಟು ಹೋಗಿಲ್ಲ. ಈಗಲೂ ವೈಯಕ್ತಿಕವಾಗಿ ನನಗೆ ಅನ್ಯಾಯವಾಗಿದ್ದು ನಿಜ. ಆದರೆ, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ’ ಎಂದು ಹೇಳಿದರು.