<p><strong>ಬೆಂಗಳೂರು</strong>: ‘ಬೇರೆ ಪ್ರಶ್ನೆ ಇದ್ರೆ ಕೇಳಣ್ಣ...!’</p><p>‘ಕೆ.ಎಸ್.ಈಶ್ವರಪ್ಪ ಅವರನ್ನು ರಾಜ್ಯಪಾಲ ಮಾಡುವ ಪ್ರಸ್ತಾಪ ಇದೆಯೇ’ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲಿನಂತೆ ಪ್ರತಿಕ್ರಿಯಿಸಿದರು.</p><p>‘ಈಶ್ವರಪ್ಪ ಕಥೆ ಏನು’ ಎಂಬ ಮತ್ತೊಂದು ಪ್ರಶ್ನೆಗೆ, ‘ಅವರು ಹಿರಿಯ ನಾಯಕರು. ಕೆಲವು ತಪ್ಪು ಮಾಹಿತಿಗಳು ಅವರಿಗೆ ತಲುಪಿವೆ. ಹೀಗಾಗಿ ಈ ರೀತಿಯ ಚರ್ಚೆಗಳು ನಡೆಯುತ್ತಿವೆ. ಅವರಿಗೆ ಸತ್ಯ ಅರ್ಥ ಆದ ಮೇಲೆ ಸಮಸ್ಯೆ ಬಗೆಹರಿಯುವ ವಿಶ್ವಾಸ ಈಗಲೂ ಇದೆ’ ಎಂದು ಹೇಳಿದರು.</p><p>ಅಸಮಾಧಾನಗೊಂಡಿರುವ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸೆಳೆಯಲು ಮುಂದಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಳೆದ ಒಂದು ವಾರದ ಘಟನೆಗಳನ್ನು ಅವಲೋಕನ ಮಾಡಿದರೆ, ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಅವರ ನಾಯಕರಿಗಿಂತ ಬಿಜೆಪಿ ಮುಖಂಡರ ಬಗ್ಗೆಯೇ ಹೆಚ್ಚು ವಿಶ್ವಾಸ ಬಂದಿದೆ.</p><p>ಎಂ.ಬಿ.ಪಾಟೀಲ ಮತ್ತು ಇತರರ ಹೇಳಿಕೆಗಳನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಸದಾನಂದಗೌಡ ಬಿಜೆಪಿ ಬಿಟ್ಟು ಹೋಗುವುದಿಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೇರೆ ಪ್ರಶ್ನೆ ಇದ್ರೆ ಕೇಳಣ್ಣ...!’</p><p>‘ಕೆ.ಎಸ್.ಈಶ್ವರಪ್ಪ ಅವರನ್ನು ರಾಜ್ಯಪಾಲ ಮಾಡುವ ಪ್ರಸ್ತಾಪ ಇದೆಯೇ’ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲಿನಂತೆ ಪ್ರತಿಕ್ರಿಯಿಸಿದರು.</p><p>‘ಈಶ್ವರಪ್ಪ ಕಥೆ ಏನು’ ಎಂಬ ಮತ್ತೊಂದು ಪ್ರಶ್ನೆಗೆ, ‘ಅವರು ಹಿರಿಯ ನಾಯಕರು. ಕೆಲವು ತಪ್ಪು ಮಾಹಿತಿಗಳು ಅವರಿಗೆ ತಲುಪಿವೆ. ಹೀಗಾಗಿ ಈ ರೀತಿಯ ಚರ್ಚೆಗಳು ನಡೆಯುತ್ತಿವೆ. ಅವರಿಗೆ ಸತ್ಯ ಅರ್ಥ ಆದ ಮೇಲೆ ಸಮಸ್ಯೆ ಬಗೆಹರಿಯುವ ವಿಶ್ವಾಸ ಈಗಲೂ ಇದೆ’ ಎಂದು ಹೇಳಿದರು.</p><p>ಅಸಮಾಧಾನಗೊಂಡಿರುವ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸೆಳೆಯಲು ಮುಂದಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಳೆದ ಒಂದು ವಾರದ ಘಟನೆಗಳನ್ನು ಅವಲೋಕನ ಮಾಡಿದರೆ, ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಅವರ ನಾಯಕರಿಗಿಂತ ಬಿಜೆಪಿ ಮುಖಂಡರ ಬಗ್ಗೆಯೇ ಹೆಚ್ಚು ವಿಶ್ವಾಸ ಬಂದಿದೆ.</p><p>ಎಂ.ಬಿ.ಪಾಟೀಲ ಮತ್ತು ಇತರರ ಹೇಳಿಕೆಗಳನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಸದಾನಂದಗೌಡ ಬಿಜೆಪಿ ಬಿಟ್ಟು ಹೋಗುವುದಿಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>