ತೇಜಸ್ವಿ ಸೂರ್ಯ ಒಂದು ಬಾರಿ ಸಂಸದರಾಗಿ ಕಾರ್ಯ ನಿರ್ವಹಿಸಿರುವುದರಿಂದ ಕ್ಷೇತ್ರ ಪರಿಚಯ ಸಾಕಷ್ಟು ಚೆನ್ನಾಗಿಯೇ ಇದೆ. ಕ್ಷೇತ್ರದಲ್ಲಿ ಅನಂತಕುಮಾರ್ ಸಂಸದರಾಗಿದ್ದಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಹೀಗಾಗಿ ದೊಡ್ಡ ಮಟ್ಟದ ಅಭಿವೃದ್ಧಿ ಕೆಲಸಗಳು ಇಲ್ಲದೇ ಹೋದರೂ, ಸ್ಥಳೀಯ ಮಟ್ಟದ ಸಮಸ್ಯೆಗಳೂ ತೇಜಸ್ವಿ ಅವರನ್ನು ಕಾಡುತ್ತಿವೆ. ತಮ್ಮ ಮಾತಿನ ಚಾಕಚಕ್ಯತೆ ಮತ್ತು ಬುದ್ಧಿವಂತಿಕೆಯಿಂದ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದರೂ, ಸ್ಥಳೀಯವಾಗಿ ಪಕ್ಷದ ಶಾಸಕರು, ನಾಯಕರು ಮತ್ತು ಅಧಿಕಾರಿಗಳ ಮೇಲೆ ಹಿಡಿತ ಹೊಂದಲು ಇನ್ನೂ ಸಾಧ್ಯವಾಗಿಲ್ಲ. ಇದಕ್ಕೆ ಚಿಕ್ಕ ವಯಸ್ಸೂ ಕಾರಣ ಎಂಬ ಅಭಿಪ್ರಾಯವಿದೆ.