ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ. ದೇವೇಗೌಡರ ಅಳಿಯರಾದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ನಿಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರ, ಹಾಲಿ ಸಂಸದ ಡಿ.ಕೆ. ಸುರೇಶ್ ಮರು ಆಯ್ಕೆ ಬಯಸಿ ಕಣಕ್ಕೆ ಇಳಿದಿದ್ದಾರೆ.