ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರಿಯಾನಿ ವ್ಯವಸ್ಥೆ ಮಾಡಿರುವುದಾಗಿ ಹೇಳಿಕೆ: ಎಸ್‌.ಟಿ. ಸೋಮಶೇಖರ್‌ ವಿರುದ್ಧ ದೂರು

Last Updated 13 ಏಪ್ರಿಲ್ 2023, 12:39 IST
ಅಕ್ಷರ ಗಾತ್ರ

ರಾಮನಗರ: ಮತದಾರರಿಗೆ ಬಿರಿಯಾನಿ ಹಂಚಿಕೆ ಮಾಡಿದ್ದಾಗಿ ಹೇಳಿದ ಆರೋಪದ ಮೇಲೆ ಸಚಿವ ಎಸ್‌.ಟಿ. ಸೋಮಶೇಖರ್ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದ ವೇಳೆ ಸೋಮಶೇಖರ್ ತಮ್ಮ ಭಾಷಣದಲ್ಲಿ ಬಿರಿಯಾನಿ ಊಟದ ವ್ಯವಸ್ಥೆ ಮಾಡಿರುವುದಾಗಿ ಹೇಳಿದ್ದರು. ಈ ಕುರಿತು ಜೆಡಿಎಸ್‌ನ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ ವಿಡಿಯೊ ದಾಖಲೆ ಸಮೇತ ಯಶವಂತಪುರ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು.

ಚುನಾವಣಾ ಅಧಿಕಾರಿಗಳು ನೀಡಿದ ದೂರಿನಂತೆ ನೀತಿಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕಗ್ಗಲೀಪುರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT