ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರೀತಂಗೌಡ, ‘ನಮ್ಮ ಪಕ್ಷದ ವರಿಷ್ಠರು ರಣತಂತ್ರ ಮಾಡಿದ್ದಾರೆ. ಆ ತಂತ್ರ ಏನೆಂದು ಇನ್ನೂ ತಿಳಿದಿಲ್ಲ. ಸೂಚನೆ ಬಂದರೆ, ಅದರಂತೆ ನಡೆದುಕೊಳ್ಳುತ್ತೇನೆ. ಕಾದು ನೋಡಿ’ ಎಂದು ಹೇಳಿದ್ದಾರೆ. ಈ ಮೂಲಕ ಹಾಸನ, ಹೊಳೆನರಸೀಪುರ ಎರಡೂ ಕ್ಷೇತ್ರಗಳಲ್ಲಿ ಪ್ರೀತಂ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗುತ್ತಿದೆ.