<p><strong>ಬಳ್ಳಾರಿ:</strong> ಹಿರಿಯ ಬಿಜೆಪಿ ಮುಖಂಡರಾದ ಜಗದೀಶ್ ಶೆಟ್ಟರ್ ಹಾಗೂ ಕೆ.ಎಸ್. ಈಶ್ವರಪ್ಪ ಅವರಿಗೆ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.</p>.<p>ತಮ್ಮ ಮಗ ಕಾಂತೇಶ್ ಅವರಿಗೆ ಪಕ್ಷದ ಟಿಕೆಟ್ ದೊರಕಿಸುವಂತೆ ದೇವರಲ್ಲಿ ಪ್ರಾರ್ಥಿಸಲು ಬಳ್ಳಾರಿ ನಗರದಲ್ಲಿರುವ ಮನೆ ದೇವರು ಚೌಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಬಂದಿದ್ದ ಈಶ್ವರಪ್ಪ ಶುಕ್ರವಾರ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಮಗೆ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವಂತೆ ಸೂಚಿಸಿದ್ದಾರೆ. ಬಿ.ಎಸ್. ಸಂತೋಷ್ ಅವರೂ ಮಾತನಾಡಿದ್ದಾರೆ ಎಂದು ಈಶ್ವರಪ್ಪ ಹೇಳಿದರು.</p>.<p>‘ಪಕ್ಷದ ಸೂಚನೆ ಹಿನ್ನೆಲೆಯಲ್ಲಿ ನಾನು ಪಕ್ಷ ರಾಜಕಾರಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಬಿಜೆಪಿ ನನಗೆ ಎಲ್ಲ ಸ್ಥಾನಮಾನ, ಗೌರವ ಕೊಟ್ಟಿದೆ. ಪಕ್ಷ ವಹಿಸಿದ್ದ ಜವಾಬ್ದಾರಿಗಳನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ತೃಪ್ತಿ ಇದೆ. ಈ ಚುನಾವಣೆಯಲ್ಲೂ ಪಕ್ಷ ಕೊಟ್ಟ ಕೆಲಸ ಮಾಡುತ್ತೇನೆ’ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.</p>.<p><strong>ಪಕ್ಷಕ್ಕೆ ಬಿಟ್ಟ ನಿರ್ಧಾರ: </strong>ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮಗನಿಗೆ ಟಿಕೆಟ್ ಕೊಡುವ ವಿಚಾರ ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ. ಆ ಬಗ್ಗೆ ತಮಗೇನೂ ಗೊತ್ತಿಲ್ಲ ಎಂದು ಈಶ್ವರಪ್ಪ ನುಡಿದರು.</p>.<p>ಪಕ್ಷದ ಟಿಕೆಟ್ ಸಿಗದವರು ಸ್ವಾಭಾವಿಕವಾಗಿ ರಾಜೀನಾಮೆ ಕೊಡುತ್ತಾರೆ. ಯಾರೂ ಕೂಡ ಬ್ಲಾಕ್ ಮೇಲ್ ಮಾಡಬಾರದು. ಅಸಮಾಧಾನಗೊಂಡವರನ್ನ ಪಕ್ಷದ ವರಿಷ್ಠರು ಮನವೊಲಿಸುತ್ತಿದ್ದಾರೆ ಎಂದು ಅವರು ವಿವರಿಸಿದರು.</p>.<p><strong>ಓದಿ... <a href="https://www.prajavani.net/district/ballari/pfi-organization-had-also-plotted-to-kill-me-says-ks-eshwarappa-1031581.html" target="_blank">ಪಿಎಫ್ಐ ಸಂಘಟನೆ ನನ್ನ ಹತ್ಯೆಗೂ ಸಂಚು ರೂಪಿಸಿತ್ತು: ಕೆ.ಎಸ್.ಈಶ್ವರಪ್ಪ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಹಿರಿಯ ಬಿಜೆಪಿ ಮುಖಂಡರಾದ ಜಗದೀಶ್ ಶೆಟ್ಟರ್ ಹಾಗೂ ಕೆ.ಎಸ್. ಈಶ್ವರಪ್ಪ ಅವರಿಗೆ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.</p>.<p>ತಮ್ಮ ಮಗ ಕಾಂತೇಶ್ ಅವರಿಗೆ ಪಕ್ಷದ ಟಿಕೆಟ್ ದೊರಕಿಸುವಂತೆ ದೇವರಲ್ಲಿ ಪ್ರಾರ್ಥಿಸಲು ಬಳ್ಳಾರಿ ನಗರದಲ್ಲಿರುವ ಮನೆ ದೇವರು ಚೌಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಬಂದಿದ್ದ ಈಶ್ವರಪ್ಪ ಶುಕ್ರವಾರ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಮಗೆ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವಂತೆ ಸೂಚಿಸಿದ್ದಾರೆ. ಬಿ.ಎಸ್. ಸಂತೋಷ್ ಅವರೂ ಮಾತನಾಡಿದ್ದಾರೆ ಎಂದು ಈಶ್ವರಪ್ಪ ಹೇಳಿದರು.</p>.<p>‘ಪಕ್ಷದ ಸೂಚನೆ ಹಿನ್ನೆಲೆಯಲ್ಲಿ ನಾನು ಪಕ್ಷ ರಾಜಕಾರಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಬಿಜೆಪಿ ನನಗೆ ಎಲ್ಲ ಸ್ಥಾನಮಾನ, ಗೌರವ ಕೊಟ್ಟಿದೆ. ಪಕ್ಷ ವಹಿಸಿದ್ದ ಜವಾಬ್ದಾರಿಗಳನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ತೃಪ್ತಿ ಇದೆ. ಈ ಚುನಾವಣೆಯಲ್ಲೂ ಪಕ್ಷ ಕೊಟ್ಟ ಕೆಲಸ ಮಾಡುತ್ತೇನೆ’ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.</p>.<p><strong>ಪಕ್ಷಕ್ಕೆ ಬಿಟ್ಟ ನಿರ್ಧಾರ: </strong>ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮಗನಿಗೆ ಟಿಕೆಟ್ ಕೊಡುವ ವಿಚಾರ ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ. ಆ ಬಗ್ಗೆ ತಮಗೇನೂ ಗೊತ್ತಿಲ್ಲ ಎಂದು ಈಶ್ವರಪ್ಪ ನುಡಿದರು.</p>.<p>ಪಕ್ಷದ ಟಿಕೆಟ್ ಸಿಗದವರು ಸ್ವಾಭಾವಿಕವಾಗಿ ರಾಜೀನಾಮೆ ಕೊಡುತ್ತಾರೆ. ಯಾರೂ ಕೂಡ ಬ್ಲಾಕ್ ಮೇಲ್ ಮಾಡಬಾರದು. ಅಸಮಾಧಾನಗೊಂಡವರನ್ನ ಪಕ್ಷದ ವರಿಷ್ಠರು ಮನವೊಲಿಸುತ್ತಿದ್ದಾರೆ ಎಂದು ಅವರು ವಿವರಿಸಿದರು.</p>.<p><strong>ಓದಿ... <a href="https://www.prajavani.net/district/ballari/pfi-organization-had-also-plotted-to-kill-me-says-ks-eshwarappa-1031581.html" target="_blank">ಪಿಎಫ್ಐ ಸಂಘಟನೆ ನನ್ನ ಹತ್ಯೆಗೂ ಸಂಚು ರೂಪಿಸಿತ್ತು: ಕೆ.ಎಸ್.ಈಶ್ವರಪ್ಪ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>