ಪಕ್ಷದ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಅವರ ಪತ್ರಿಕಾಗೋಷ್ಠಿ ನಿಗದಿಯಾಗಿತ್ತು. ವೇದಿಕೆಯ ಬದಿ ಮೇಜಿನ ಮೇಲೆ ಬಿಜೆಪಿ ಸಂಸ್ಥಾಪಕರಾದ ಶ್ಯಾಮ ಪ್ರಸಾದ ಮುಖರ್ಜಿ, ದೀನದಯಾಳ ಉಪಾಧ್ಯಾಯ, ಭಾರತಮಾತೆ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹರ್ಷಿ ವಾಲ್ಮೀಕಿ ಭಾವಚಿತ್ರಗಳಿದ್ದವು. ‘ಇವರೆಲ್ಲರ ಜೊತೆಗೆ ಬಸವಣ್ಣನವರ ಭಾವಚಿತ್ರ ಏಕಿಲ್ಲ’ ಎಂದು ಕೆಲವರು ಆಕ್ಷೇಪಿಸಿದಾಗ, ಕಾರ್ಯಕರ್ತರೊಬ್ಬರು ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವಚಿತ್ರಗಳನ್ನು ಹೊರಒಯ್ದರು.