ಬೀದರ್: ‘ಕಾಂಗ್ರೆಸ್ನವರು ನಪುಂಸಕರು, ಷಂಡರು’ ಎಂದು ಬಿಜೆಪಿ ಹಿರಿಯ ಮುಖಂಡ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ನಗರದ ಗಣೇಶ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು
‘ಭಾರತ ದೇಶವನ್ನು ಮೂರು ಭಾಗ ಮಾಡಿದವರು ಈ ಕಾಂಗ್ರೆಸ್ಸಿನವರು. ಈಗ ಆ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವುದೇಕೆ? ಅಖಂಡ ಭಾರತ, ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿದೆ’ ಎಂದರು.