<p><strong>ಬೆಂಗಳೂರು:</strong> ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕೊಡುಗು–ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು ನೀಡಿದೆ.</p>.ಸೇವೆ ಮಾಡಲು ಅವಕಾಶ ಕೊಡಿ: ಯದುವೀರ .<p>ಈ ಬಗ್ಗೆ ಶನಿವಾರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದ್ದು, ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಗೆ ತೀವ್ರ ಅಪಾಯವನ್ನುಂಟುಮಾಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುವ ಕಾರ್ಯದಲ್ಲಿ ಒಡೆಯರ್ ತೊಡಗಿದ್ದಾರೆ’ ಎಂದು ಹೇಳಿದೆ.</p><p>‘ತಮ್ಮ ಚುನಾವಣಾ ಪ್ರಚಾರಕ್ಕೆ ಬೆಂಬಲ ಕೋರಲು ಹಾಗೂ ಪ್ರಭಾವ ಬೀರಲು ಸಾಮಾಜಿಕ ಜಾಲತಾಣದಲ್ಲಿ ಪ್ರಭಾವಿಗಳಾಗಿರುವ ಹಲವು ಮಂದಿಯೊಂದಿಗೆ ಒಡೆಯರ್ ರಹಸ್ಯ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ, ನೋಟ್ಬುಕ್, ಪೆನ್, ಚಾಕೊಲೇಟ್, ಸೀರೆ ಹಾಗೂ ಸಿಹಿತಿಂಡಿಗಳನ್ನು ಹಂಚುವ ಮೂಲಕ ಸಾಮಾಜಿಕ ಜಾಲತಾಣ ಇನ್ಫ್ಲುವೆನ್ಸರ್ಗಳನ್ನು ಓಲೈಕೆ ಮಾಡುವ ಪ್ರಯತ್ನ ಮಾಡಿದ್ದಾರೆ’ ಎಂದು ಕಾಂಗ್ರೆಸ್ ದೂರಿದೆ.</p>.ಹಿಂದುಳಿದವರ ಏಳಿಗೆಗೆ ದುಡಿದ ನಾಲ್ವಡಿ ಕೃಷ್ಣರಾಜರೇ ನನಗೆ ಆದರ್ಶ: ಯದುವೀರ ಒಡೆಯರ್.<p>ತಮ್ಮ ಬಗ್ಗೆ ಪ್ರಚಾರ ನಡೆಸಲು ಗಣನೀಯ ಪ್ರಮಾಣದ ಹಣವನ್ನೂ ಹಂಚಲಾಗಿದೆ ಎಂದು ಕಾಂಗ್ರೆಸ್ ದೂರಿನಲ್ಲಿ ಆರೋಪಿಸಿದೆ.</p><p>ಪ್ರಭಾವ ಬೀರಲು ಹಣ ಹಂಚುವುದು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ಮೂಲಭೂತ ತತ್ವಗಳನ್ನು ಉಲ್ಲಂಘಿಸುವುದಲ್ಲದೇ, ಭಾರತೀಯ ದಂಡ ಸಂಹಿತೆಯ ಜನಪ್ರತಿನಿಧಿ ಕಾಯ್ದೆ 1951ರಡಿ ಗಂಭೀರ ಅಪರಾಧವಾಗಿದೆ ಎಂದು ಕಾಂಗ್ರೆಸ್ ಪತ್ರದಲ್ಲಿ ಉಲ್ಲೇಖಿಸಿದೆ.</p>.LS Polls | ಮೈಸೂರು: ಕೈ, ಕಮಲಕ್ಕೆ ‘ಕ್ರಮ ಸಂಖ್ಯೆ’ ತಲೆನೋವು!. <p>ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದೇ ಆದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ. ಅಲ್ಲದೇ ಚುನಾವಣೆ ಪ್ರಕ್ರಿಯೆಯು ಮುಕ್ತ, ನ್ಯಾಯಯುತ, ಮತ್ತು ಭ್ರಷ್ಟ ಆಚರಣೆಗಳಿಂದ ಹೊರತಾಗಿರಬೇಕು ಎಂದು ಹೇಳಿದೆ.</p> .LS Polls | ಮೈಸೂರು: ಸಾರ್ವಜನಿಕರ ಆಕರ್ಷಿಸುತ್ತಿವೆ ಗೋಡೆ ಬರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕೊಡುಗು–ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು ನೀಡಿದೆ.</p>.ಸೇವೆ ಮಾಡಲು ಅವಕಾಶ ಕೊಡಿ: ಯದುವೀರ .<p>ಈ ಬಗ್ಗೆ ಶನಿವಾರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದ್ದು, ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಗೆ ತೀವ್ರ ಅಪಾಯವನ್ನುಂಟುಮಾಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುವ ಕಾರ್ಯದಲ್ಲಿ ಒಡೆಯರ್ ತೊಡಗಿದ್ದಾರೆ’ ಎಂದು ಹೇಳಿದೆ.</p><p>‘ತಮ್ಮ ಚುನಾವಣಾ ಪ್ರಚಾರಕ್ಕೆ ಬೆಂಬಲ ಕೋರಲು ಹಾಗೂ ಪ್ರಭಾವ ಬೀರಲು ಸಾಮಾಜಿಕ ಜಾಲತಾಣದಲ್ಲಿ ಪ್ರಭಾವಿಗಳಾಗಿರುವ ಹಲವು ಮಂದಿಯೊಂದಿಗೆ ಒಡೆಯರ್ ರಹಸ್ಯ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ, ನೋಟ್ಬುಕ್, ಪೆನ್, ಚಾಕೊಲೇಟ್, ಸೀರೆ ಹಾಗೂ ಸಿಹಿತಿಂಡಿಗಳನ್ನು ಹಂಚುವ ಮೂಲಕ ಸಾಮಾಜಿಕ ಜಾಲತಾಣ ಇನ್ಫ್ಲುವೆನ್ಸರ್ಗಳನ್ನು ಓಲೈಕೆ ಮಾಡುವ ಪ್ರಯತ್ನ ಮಾಡಿದ್ದಾರೆ’ ಎಂದು ಕಾಂಗ್ರೆಸ್ ದೂರಿದೆ.</p>.ಹಿಂದುಳಿದವರ ಏಳಿಗೆಗೆ ದುಡಿದ ನಾಲ್ವಡಿ ಕೃಷ್ಣರಾಜರೇ ನನಗೆ ಆದರ್ಶ: ಯದುವೀರ ಒಡೆಯರ್.<p>ತಮ್ಮ ಬಗ್ಗೆ ಪ್ರಚಾರ ನಡೆಸಲು ಗಣನೀಯ ಪ್ರಮಾಣದ ಹಣವನ್ನೂ ಹಂಚಲಾಗಿದೆ ಎಂದು ಕಾಂಗ್ರೆಸ್ ದೂರಿನಲ್ಲಿ ಆರೋಪಿಸಿದೆ.</p><p>ಪ್ರಭಾವ ಬೀರಲು ಹಣ ಹಂಚುವುದು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ಮೂಲಭೂತ ತತ್ವಗಳನ್ನು ಉಲ್ಲಂಘಿಸುವುದಲ್ಲದೇ, ಭಾರತೀಯ ದಂಡ ಸಂಹಿತೆಯ ಜನಪ್ರತಿನಿಧಿ ಕಾಯ್ದೆ 1951ರಡಿ ಗಂಭೀರ ಅಪರಾಧವಾಗಿದೆ ಎಂದು ಕಾಂಗ್ರೆಸ್ ಪತ್ರದಲ್ಲಿ ಉಲ್ಲೇಖಿಸಿದೆ.</p>.LS Polls | ಮೈಸೂರು: ಕೈ, ಕಮಲಕ್ಕೆ ‘ಕ್ರಮ ಸಂಖ್ಯೆ’ ತಲೆನೋವು!. <p>ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದೇ ಆದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ. ಅಲ್ಲದೇ ಚುನಾವಣೆ ಪ್ರಕ್ರಿಯೆಯು ಮುಕ್ತ, ನ್ಯಾಯಯುತ, ಮತ್ತು ಭ್ರಷ್ಟ ಆಚರಣೆಗಳಿಂದ ಹೊರತಾಗಿರಬೇಕು ಎಂದು ಹೇಳಿದೆ.</p> .LS Polls | ಮೈಸೂರು: ಸಾರ್ವಜನಿಕರ ಆಕರ್ಷಿಸುತ್ತಿವೆ ಗೋಡೆ ಬರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>