ಸುರತ್ಕಲ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಪದ್ಮರಾಜ್ ಆರ್. ಪರ ರೋಡ್ ಶೋ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಹೊಸಬೆಟ್ಟುವಿನಿಂದ ಬೈಕಂಪಾಡಿ ಎಪಿಎಂಸಿ ವರೆಗೆ ನಡೆಯಿತು.
ಬೈಕಂಪಾಡಿ ಜಂಕ್ಷನ್ನಲ್ಲಿ ಹೂವಿನ ಬೃಹತ್ ಹಾರವನ್ನು ಕಾರ್ಯಕರ್ತರು ಇನಾಯತ್ ಅಲಿ ಮತ್ತು ಅಭ್ಯರ್ಥಿ ಪದ್ಮರಾಜ್ ಅವರಿಗೆ ಹಾಕಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಇನಾಯತ್ ಅಲಿ, ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರಿಗೆ ಅಭಿವೃದ್ಧಿಯ ಆಡಳಿತ ನೀಡಿಲ್ಲ. ಬದಲಿಗೆ ಪ್ರಧಾನಿ ಮೋದಿ ಸುಳ್ಳುಗಳ ಮೇಲೆ ಸುಳ್ಳನ್ನು ಹೇಳಿರುವುದೇ ಅವರ ಬಲುದೊಡ್ಡ ಸಾಧನೆ. ಈ ಬಾರಿ ಕಾಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರನ್ನು ಗೆಲ್ಲಿಸಬೇಕು’ ಎಂದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಪಕ್ಷದ ಅಭ್ಯರ್ಥಿ ಪದ್ಮರಾಜ್ ಮಾತನಾಡಿದರು.
ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ, ಪೃಥ್ವಿರಾಜ್, ಗಿರೀಶ್ ಆಳ್ವ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ಚಿತ್ರಾಪುರ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ಯು.ಪಿ.ಇಬ್ರಾಹಿಂ, ಎಂ.ಜಿ.ಹೆಗಡೆ ಭಾಗವಹಿಸಿದ್ದರು.
ಬೈಕಂಪಾಡಿ ಎಪಿಎಂಸಿ ಬಳಿ ನಡೆದ ಬಹಿರಂಗ ಸಭೆಯಲ್ಲಿ ಬಿಜೆಪಿ ವಿರುದ್ಧ ಚೊಂಬು ಪ್ರದರ್ಶಿಸಿದರು