<p><strong>ಕೊಪ್ಪಳ:</strong> ’ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಾಯಕತ್ವ ವಹಿಸುವುದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿರುತ್ತೇನೆ’ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.</p><p>ಎರಡು ಬಾರಿ ಬಿಜೆಪಿಯಿಂದ ಸಂಸದರಾಗಿರುವ ಅವರಿಗೆ ಈ ಬಾರಿ ಟಿಕೆಟ್ ತಪ್ಪಿದೆ. ಇದರಿಂದ ಅಸಮಾಧಾನಗೊಂಡಿರುವ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ, ಪ್ರಲ್ಹಾದ ಜೋಶಿ ಮತ್ತು ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಂಗಳೂರಿನಲ್ಲಿ ಮನವೊಲಿಸುವ ಪ್ರಯತ್ನ ಮಾಡಿದರು.</p><p>ಸಭೆಯ ಬಳಿಕ ಸಂಗಣ್ಣ ಕರಡಿ ‘ಪ್ರಜಾವಾಣಿ’ ಜೊತೆ ಮಾತನಾಡಿ, ’ಒಂದು ಕಡೆ ಟಿಕೆಟ್ ಬದಲಿಸಿದರೆ ಬೇರೆ ಕಡೆಯೂ ಇದೇ ಸಮಸ್ಯೆಯಾಗುತ್ತದೆ. ಆದರೂ ಈ ವಿಚಾರ ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ರಾಜ್ಯದ ಮುಖಂಡರು ಹೇಳಿದ್ದಾರೆ. ಅದು ಏನೇ ಆಗಲಿ ಪಕ್ಷದಲ್ಲಿ ಕಾರ್ಯಕರ್ತನಾಗಿ ಇರುವೆ. ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡುವುದಿಲ್ಲ. ಪ್ರಚಾರದ ನಾಯಕತ್ವವೂ ವಹಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p><p>ಪಕ್ಷದ ಅಭ್ಯರ್ಥಿಯಾಗಿರುವ ಡಾ. ಬಸವರಾಜ ಕ್ಯಾವಟರ್ ’ಸಂಗಣ್ಣ ಅವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ’ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಾಯಕತ್ವ ವಹಿಸುವುದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿರುತ್ತೇನೆ’ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.</p><p>ಎರಡು ಬಾರಿ ಬಿಜೆಪಿಯಿಂದ ಸಂಸದರಾಗಿರುವ ಅವರಿಗೆ ಈ ಬಾರಿ ಟಿಕೆಟ್ ತಪ್ಪಿದೆ. ಇದರಿಂದ ಅಸಮಾಧಾನಗೊಂಡಿರುವ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ, ಪ್ರಲ್ಹಾದ ಜೋಶಿ ಮತ್ತು ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಂಗಳೂರಿನಲ್ಲಿ ಮನವೊಲಿಸುವ ಪ್ರಯತ್ನ ಮಾಡಿದರು.</p><p>ಸಭೆಯ ಬಳಿಕ ಸಂಗಣ್ಣ ಕರಡಿ ‘ಪ್ರಜಾವಾಣಿ’ ಜೊತೆ ಮಾತನಾಡಿ, ’ಒಂದು ಕಡೆ ಟಿಕೆಟ್ ಬದಲಿಸಿದರೆ ಬೇರೆ ಕಡೆಯೂ ಇದೇ ಸಮಸ್ಯೆಯಾಗುತ್ತದೆ. ಆದರೂ ಈ ವಿಚಾರ ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ರಾಜ್ಯದ ಮುಖಂಡರು ಹೇಳಿದ್ದಾರೆ. ಅದು ಏನೇ ಆಗಲಿ ಪಕ್ಷದಲ್ಲಿ ಕಾರ್ಯಕರ್ತನಾಗಿ ಇರುವೆ. ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡುವುದಿಲ್ಲ. ಪ್ರಚಾರದ ನಾಯಕತ್ವವೂ ವಹಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p><p>ಪಕ್ಷದ ಅಭ್ಯರ್ಥಿಯಾಗಿರುವ ಡಾ. ಬಸವರಾಜ ಕ್ಯಾವಟರ್ ’ಸಂಗಣ್ಣ ಅವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>