‘ಜನಸಾಮಾನ್ಯರಿಗೆ ಆಡುಭಾಷೆಯಲ್ಲಿ ವೈದ್ಯಕೀಯ ಮಾಹಿತಿಗಳನ್ನು ತಿಳಿಸುವ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಆಂಜನಪ್ಪ ಅವರು ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿದ್ದಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅವರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡಲಾಗಿದೆ’ ಎಂದು ಕೆಆರ್ಎಸ್ಪಿ ಉಪಾಧ್ಯಕ್ಷ ಲಿಂಗೇಗೌಡ ಹೇಳಿದ್ದಾರೆ.