ಗೋಕಾಕ ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು– ಲಕ್ಷ್ಮಣ ನಿಜವಾಗಿ ಒಳ್ಳೆಯ ಗೆಳೆಯರು. ಯಾವುದೋ ಕೆಟ್ಟ ಘಳಿಗೆಯಲ್ಲಿ ಬೇರೆಬೇರೆ ಆಗಿದ್ದೇವೆ. ನಾನು ಮೊದಲ ಕಾಂಗ್ರೆಸ್ನಲ್ಲಿದ್ದೆ. ಅವನು ಬಿಜೆಪಿಯಲ್ಲಿದ್ದ. ಈಗ ಇಬ್ಬರೂ ಒಂದೇ ಕಡೆ ಇದ್ದೇವೆ. ಕಾಂಗ್ರೆಸ್ ಬಗ್ಗೆ ನನಗೆ ಗೊತ್ತು. ಅದು ಮೋಸದ ಪಕ್ಷ. ಬಿಜೆಪಿ ಬಿಟ್ಟು ಅಂಥ ಪಕ್ಷ ಸೇರಬಾರದು’ ಎಂದರು.