ರಾಜ್ಯದಲ್ಲಿ ಈಗ ಆಡಳಿತದಲ್ಲಿರುವ ಕಾಂಗ್ರೆಸ್, ಕ್ಷೇತ್ರವನ್ನು ಮತ್ತೆ ‘ಕೈ’ ವಶ ಮಾಡಿಕೊಳ್ಳಲು ಕಸರತ್ತು ನಡೆಸಿದೆ. ಹಿರಿಯ ಶಾಸಕ ಇ. ತುಕಾರಾಮ್ ಅವರನ್ನೇ ಪಕ್ಷ ಕಣಕ್ಕಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಷೇತ್ರದ ಬಗ್ಗೆ ಮುತುವರ್ಜಿ ವಹಿಸಿದ್ದಾರೆ. ಸಚಿವರಾದ ಬಿ. ನಾಗೇಂದ್ರ, ಜಮೀರ್ ಅಹಮದ್, ಸಂತೋಷ್ ಲಾಡ್ ಮತ್ತು ಕ್ಷೇತ್ರ ವ್ಯಾಪ್ತಿಯ ಆರು ಶಾಸಕರು, ಮುಖಂಡರು ‘ಕೈ’ ಬಲಪಡಿಸುತ್ತಿದ್ದಾರೆ.