ಈ ಬಗ್ಗೆ ತಿಂಗಳ ಹಿಂದೆಯೇ ಚರ್ಚೆ ಹುಟ್ಟಿಕೊಂಡಿತ್ತು, ಕುಮಾರಸ್ವಾಮಿ ಮಂಡ್ಯದಿಂದಲೂ ಸ್ಪರ್ಧಿಸುತ್ತಾರೆ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸಂಸದೆ ಸುಮಲತಾ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆಗಳು ಗರಿಗೆದರಿದ್ದವು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಎಚ್ಡಿಕೆ ಚನ್ನಪಟ್ಟಣದಿಂದ ಮಾತ್ರ ಸ್ಪರ್ಧಿಸಲಾಗುವುದು ಎಂದಿದ್ದರು, ಅಲ್ಲಿಂದ ಚರ್ಚೆ ತಣ್ಣಗಾಗಿತ್ತು.