ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಜಾಗತಿಕ ಸಂಕಷ್ಟ | ಮೋದಿ ನಾಯಕತ್ವವೇ ಸೂಕ್ತ: ಜೈಶಂಕರ್

Published : 15 ಏಪ್ರಿಲ್ 2024, 16:06 IST
Last Updated : 15 ಏಪ್ರಿಲ್ 2024, 16:06 IST
ಫಾಲೋ ಮಾಡಿ
Comments
‘ದೂತಾವಾಸದ ಜತೆ ಸಂಪರ್ಕದಲ್ಲಿರಿ’
‘ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ದೂತಾವಾಸದ ಜತೆ ಸಂಪರ್ಕದಲ್ಲಿರಬೇಕು. ಯಾವುದೇ ರೀತಿಯ ತೊಂದರೆ ಆದಲ್ಲಿ ದೂತಾವಾಸದ ಗಮನಕ್ಕೆ ತರಬೇಕು’ ಎಂದು ಜೈಶಂಕರ್ ಮನವಿ ಮಾಡಿದರು. ಅಮೆರಿಕ ಕೆನಡಾ ಮತ್ತಿತರ ದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಹತ್ಯೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ದೂತಾವಾಸದ ಸಿಬ್ಬಂದಿಗೂ ಭಾರತೀಯ ವಿದ್ಯಾರ್ಥಿಗಳ ಜತೆ ಸಂಪರ್ಕದಲ್ಲಿ ಇರಲು ಸೂಚನೆ ನೀಡಲಾಗಿದೆ ಎಂದರು.
ಶೀಘ್ರವೇ ಯುಎಸ್‌ ಕಾನ್ಸುಲೇಟ್ ಕಚೇರಿ ಬೆಂಗಳೂರಿನಲ್ಲಿ
ಅಮೆರಿಕಾದ ಕಾನ್ಸುಲೇಟ್‌ ಕಚೇರಿ ಆದಷ್ಟು ಶೀಘ್ರವೇ ಆರಂಭವಾಗಲಿದೆ ಎಂದು ಜೈಶಂಕರ್ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಜೂನ್‌ನಲ್ಲಿ ಅಮೆರಿಕ ಶ್ವೇತಭವನ ಈ ವಿಷಯ ಪ್ರಕಟಿಸಿತ್ತು. ಭಾರತದ ಜತೆ ಬಾಂಧವ್ಯವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಅಮೆರಿಕ ಈ ಕ್ರಮ ತೆಗೆದುಕೊಂಡಿದೆ. ಅಲ್ಲದೇ ದಕ್ಷಿಣ ಭಾರತದಲ್ಲಿ ಬೆಂಗಳೂರಿನಿಂದ ಅತಿ ಹೆಚ್ಚು ಜನ ಅಮೆರಿಕಾಗೆ ಪ್ರಯಾಣಿಸುತ್ತಾರೆ. ಅವರಿಗೆ ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT